ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್

ಸಮಗ್ರ ನ್ಯೂಸ್: ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿದ್ದು, ಜನರಿಗೆ ಪೊಲೀಸರು ಎಚ್ಚರವಾಗಿರಿ ಎಂದು ಮಾಹಿತಿ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರನ್ನು ಸೈಬರ್ ಖದೀಮರು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ.

Ad Widget .

ಇತ್ತೀಚೆಗೆ ಕೂಡ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರ ಹೆಸರಿನಲ್ಲೇ ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ಪೊಲೀಸ್‌ ಕಮಿಷನರ್‌ ಪೋಟೋವನ್ನು ವಾಟ್ಸ್‌ ಆ್ಯಪ್ ಡಿಪಿಗೆ ಹಾಕಿದ್ದರು. ಬಳಿಕ ನಾನು ಬಿ.ದಯಾನಂದ್‌, ಬೆಂಗಳೂರು ಪೊಲೀಸ್‌ ಕಮಿಷನರ್‌ ಎಂದು ಆಪ್ತರಿಗೆ, ಸಾರ್ವಜನಿಕರಿಗೆ, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಹಲವು ಜನರಿಗೆ ಮೆಸೇಜ್ ಕಳುಹಿಸಲಾಗಿತ್ತು. ಆ ಮೂಲಕ ಕಮಿಷನರ್‌ ಹೆಸರಲ್ಲಿ ಹಣ ವಸೂಲಿಗೆ ಮುಂದಾಗಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಈ ವಿಚಾರ ಸೈಬರ್‌ ಕ್ರೈಂ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ನಕಲಿ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಲಾಗಿತ್ತು. ಸೈಬರ್‌ ಕ್ರೈಂ ಪೊಲೀಸರಿಂದ ಆರೋಪಿಗಾಗಿ ಶೋಧ ನಡೆದಿತ್ತು.

Ad Widget . Ad Widget .

ಸರ್ಕಾರಿ ಅಧಿಕಾರಿಗಳಂತೆ ನಟಿಸಿ ನಿಮ್ಮನ್ನು ಯಾಮಾರಿಸಬಹುದು. ಹಣಕ್ಕೆ ಬೇಡಿಕೆ ಇಡಬಹುದು. ಹಾಗಾಗಿ ಎಚ್ಚರಿಕೆಯಿಂದ ಇರುವಂತೆ ಆಯುಕ್ತ ಬಿ ದಯಾನಂದ ತಿಳಿಸಿದ್ದರು.

Leave a Comment

Your email address will not be published. Required fields are marked *