ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ.

Ad Widget . Ad Widget . Ad Widget .

ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget .

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ ವಿರುದ್ಧ ಶೋಧಕಾರ್ಯಾಚರಣೆ ನಡೆಸಿದೆ.

ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಹೊಣೆಯನ್ನು ಪಾಕಿಸ್ತಾನದ ಉಗ್ರ ಸಂಘಟನೆ ಟಿಆರ್ ಎಫ್ ಹೊಣೆ ಹೊತ್ತುಕೊಂಡಿದೆ. ಟಿಆರ್ ಎಫ್ ಇದು ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಘಟನೆ ಎಂದು ತಿಳಿದುಬಂದಿದೆ.

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *