ರಾಜ್ಯದಲ್ಲಿ ‌ಮತ್ತೊಂದು ಮರ್ಯಾದಾ ಹತ್ಯೆ| ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯಿಂದಲೇ ಮಗಳ ಕೊಲೆ

ಸಮಗ್ರ ನ್ಯೂಸ್: ಮಗಳು ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಆರೋಪಿಯೇ ನ್ಯಾಯಾಲಯದಲ್ಲಿ ಸತ್ಯ ವಿಚಾರ ತಿಳಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 29ರಂದು ಪುತ್ರಿ ರೇಣುಕಾಳನ್ನು (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ ಶವವನ್ನು ಮೂಟೆಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದ.

Ad Widget . Ad Widget .

ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಗ್ರಾಮ ಬಿಟ್ಟು ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷ ವಯಸ್ಸಾಗಿತ್ತು. ಮಗಳು ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.

Ad Widget . Ad Widget .

ಹನುಮಂತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು ರೇಣುಕಾ ಮಾತ್ರ ಹನುಮಂತನನ್ನೇ ಮದುವೆ ಆಗುತ್ತೇನೆಂದು ಪಟ್ಟು ಹಿಡಿದಿದ್ದಳು. ಇದಾದ ಕೆಲವು ದಿನಗಳ ನಂತರ ಹನುಮಂತ ಜಾಮೀನು ಮೇಲೆ ಹೊರ ಬಂದಿದ್ದ. ಬಳಿಕ ಆತನ ಜೊತೆ ರೇಣುಕಾ ಓಡಾಟ ಆರಂಭಿಸಿದ್ದಳು. ಎಷ್ಟೇ ಬುದ್ಧಿ ಹೇಳಿದರೂ ಕೇಳದೆ, ಹನುಮಂತನನ್ನೇ ಮದುವೆ ಆಗುವೆ ಎಂದಿದ್ದಳು. ಇದರಿಂದ ಕೋಪಗೊಂಡು ಮಗಳನ್ನು ಕೊಲೆ ಮಾಡಿರುವುದಾಗಿ ತಂದೆ ಲಕ್ಕಪ್ಪ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಇನ್ನೂ ಈ ಪ್ರಕರಣ ಬೆಳಕಿಗೆ ಬಂದಿದೆ ರೋಚಕ ಹೌದು ಪೋಕ್ಸೋ ಪ್ರಕರಣದಲ್ಲಿ ತನಿಖೆ ನಡೆಯುತ್ತಿತ್ತು ಆದರೆ ಪ್ರತಿ ವಿಚಾರಣೆಗೂ ಪುತ್ರಿ ರೇಣುಕಾ ಗೈರಾದ ಬಗ್ಗೆ ಕೋರ್ಟ್ ಪ್ರಶ್ನೆ ಮಾಡಿತ್ತು. ಮಗಳನ್ನು ವಿಚಾರಣೆಗೆ ಹಾಜರುಪಡಿಸುವಂತೆ ಕೋರ್ಟ್ ತಾಕೀತು ಮಾಡಿತ್ತು. ಇದೇ ಸಂದರ್ಭದಲ್ಲಿ ತಂದೆ ಲಕ್ಕಪ್ಪಗೆ ದಿಕ್ಕು ತೋಚದೇ ತಪ್ಪನ್ನು ಒಪ್ಪಿಕೊಂಡು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ.

Leave a Comment

Your email address will not be published. Required fields are marked *