April 2025

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು (ಎ.8) ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ […]

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಹವಾಮಾನ ವರದಿ| ಏ.12ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಮಳೆ ಮುಂದುವರಿದಿದ್ದು, ಮುಂದಿನ ಒಂದು ವಾರವೂ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 12ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,

ಹವಾಮಾನ ವರದಿ| ಏ.12ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

ಐಪಿಎಲ್ ಕ್ರಿಕೆಟ್| ಮುಂಬೈನಲ್ಲಿ ಆರ್ ಸಿಬಿಗೆ ರೋಚಕ ಜಯ

ಸಮಗ್ರ ನ್ಯೂಸ್: ಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 20ನೇ (IPL 2025) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ತಂಡವನ್ನು ಎದುರಿಸಿದ್ದ ಆರ್​ಸಿಬಿ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಗೆದ್ದುಕೊಂಡಿತು. ಮುಂಬೈ ಗೆಲ್ಲಲು ಕೊನೆಯ ಓವರ್​ನಲ್ಲಿ 19 ರನ್ ಬೇಕಿತ್ತು. ಈ ವೇಳೆ 20ನೇ ಓವರ್ ಬೌಲಿಂಗ್ ಮಾಡುವ ಜವಬ್ದಾರಿ ಹೊತ್ತ ಕೃನಾಲ್ ಪಾಂಡ್ಯ ಈ ಓವರ್​ನಲ್ಲಿ 3

ಐಪಿಎಲ್ ಕ್ರಿಕೆಟ್| ಮುಂಬೈನಲ್ಲಿ ಆರ್ ಸಿಬಿಗೆ ರೋಚಕ ಜಯ Read More »

ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..!

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ ಇದೀಗ ಶುರುವಾಗಿದೆ‌‌. ಬೇಸಿಗೆಯಲ್ಲಿ ಮಳೆ ಆರ್ಭಟ ಇರುವುದರಿಂದ ರೋಗಗಳು ಹರಡುವ ಸಾಧ್ಯತೆ ಇದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾದರೆ, ಮಳೆ ಬಂದ ಬೆನ್ನಲ್ಲೇ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಡೆಂಘಿ ಜೊತೆ ಚಿಕುನ್ ಗುನ್ಯಾ ಕೂಡಾ ಪತ್ತೆಯಾಗುತ್ತಿದ್ದು, ಕಳೆದ ಒಂದೇ ವಾರದಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಂದ ಇಲ್ಲಿಯವರೆಗೆ 260 ಚಿಕುನ್ ಗುನ್ಯಾ

ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..! Read More »

ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ ..ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ರಿಷಬ್ ಶೆಟ್ಟಿ ದಂಪತಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಾರಾಹಿ ಪಂಜುರ್ಲಿ ದೈವದ ಬಳಿ ನಟ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ದೈವ

ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ ..ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ Read More »

ರಾಜ್ಯ ಸರ್ಕಾರದ ಬಳಿಕ ಕೇಂದ್ರದಿಂದ ದರ ಏರಿಕೆ ಬರೆ| ಗೃಹಬಳಕೆ‌ ಗ್ಯಾಸ್ ಸಿಲಿಂಡರ್ ಬೆಲೆ ₹50 ಹೆಚ್ಚಳ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಬರೆ ಹಾಕಿದ್ದು, ಪ್ರಧಾನಮಂತ್ರಿ ಉಜ್ವಲಾ ಸೇರಿದಂತೆ ಗೃಹಬಳಕೆಯ ಸಿಲಿಂಡರ್‌ ದರದಲ್ಲಿ 50 ರೂಪಾಯಿ ಏರಿಕೆ ಮಾಡಿದೆ. ಈ ಕುರಿತಾಗಿ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪೂರಿ ತಿಳಿಸಿದ್ದಾರೆ. ಮಧ್ಯರಾತ್ರಿಯಿಂದಲೇ ಈ ಬೆಲೆ ಏರಿಕೆ ಜಾರಿಯಾಗಲಿದೆ. “14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಾಗಲಿದೆ. 500 ರಿಂದ 550 ರೂ.ಗಳಿಗೆ (ಉಜ್ವಲಾ ಫಲಾನುಭವಿಗಳಿಗೆ) ಮತ್ತು ಇತರರಿಗೆ ಇದು

ರಾಜ್ಯ ಸರ್ಕಾರದ ಬಳಿಕ ಕೇಂದ್ರದಿಂದ ದರ ಏರಿಕೆ ಬರೆ| ಗೃಹಬಳಕೆ‌ ಗ್ಯಾಸ್ ಸಿಲಿಂಡರ್ ಬೆಲೆ ₹50 ಹೆಚ್ಚಳ Read More »

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಕೋರ್ಟ್ ಆವರಣದಲ್ಲೇ ಮುತ್ತಿನ ಸುರಿಮಳೆ!!

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಬೆಳ್ತಂಗಡಿ ಕೋರ್ಟ್ ಆವರಣದಲ್ಲಿಯೇ ಯುವಕನೋರ್ವನು ಮುತ್ತಿಟ್ಟ ಪ್ರಸಂಗವೊಂದು ಸಂಭವಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ‌ಯಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆಗೆ ಸೋಮವಾರ ಬೆಳ್ತಂಗಡಿ ಕೋರ್ಟ್‌ನಲ್ಲಿ ವಿಚಾರಣೆಯಿತ್ತು. ಆದ್ದರಿಂದ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆತನನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಯುವಕನೋರ್ವನು ಶಾಫಿ ಬೆಳ್ಳಾರೆ ಹಣೆಗೆ ಏಕಾಏಕಿ ಮುತ್ತಿಟ್ಟಿದ್ದಾನೆ. ಇದರ ವೀಡಿಯೋ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಕೋರ್ಟ್ ಆವರಣದಲ್ಲೇ ಮುತ್ತಿನ ಸುರಿಮಳೆ!! Read More »

ನಾಳೆ (ಏ 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಏ.8ರ ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ

ನಾಳೆ (ಏ 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ಕೇರಳದಲ್ಲಿ ಇಬ್ಬರು ನಕ್ಸಲರನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸ್| ನಕ್ಸಲ್ ಮುಕ್ತ ರಾಜ್ಯಕ್ಕೆ ನಕ್ಸಲರನ್ನು ಕರೆತಂದ ಕಾರಣವೇನು?

ಸಮಗ್ರ ನ್ಯೂಸ್: ಮೂರು ನಕ್ಸಲ್/ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ‌. 8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ

ಕೇರಳದಲ್ಲಿ ಇಬ್ಬರು ನಕ್ಸಲರನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸ್| ನಕ್ಸಲ್ ಮುಕ್ತ ರಾಜ್ಯಕ್ಕೆ ನಕ್ಸಲರನ್ನು ಕರೆತಂದ ಕಾರಣವೇನು? Read More »

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ|

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗಲಿದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ. ಏಪ್ರಿಲ್‌ ತಿಂಗಳ ಆರಂಭದಲ್ಲಿಯೇ ರಾಜ್ಯ ಸರ್ಕಾರ

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ| Read More »