April 2025

ಪತ್ರಕರ್ತರಿಗೆ ಅವಮಾನ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್| ದುರಹಂಕಾರದ ವರ್ತನೆಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘ ಖಂಡನೆ| ಪತ್ರಿಕಾಗೋಷ್ಠಿಯಲ್ಲಿ ಹಲವು ಬದಲಾವಣೆಗೆ ತೀರ್ಮಾನ

ಸಮಗ್ರ ನ್ಯೂಸ್: ರಾಜೇಂದ್ರ ಕುಮಾರ್ ಮಾಧ್ಯಮದವರಿಗೆ ಮಾಡಿರುವ ಅವಮಾನವನ್ನು ಪತ್ರಕರ್ತರು ಗಂಭಿರವಾಗಿ ಪರಿಗಣಿಸಿದ್ದಾರೆ. ಜಿಲ್ಲಾ ಸಂಘದ ಕಾರ್ಯಕಾರಿಣಿ ಹಾಗೂ ಪ್ರೆಸ್ ಕ್ಲಬ್ ಪ್ರಮುಖರು ಜಂಟಿಯಾಗಿ ಸಭೆ ನಡೆಸಿ ಈ ವಿಚಾರವನ್ನು ಚರ್ಚಿಸಿದ್ದಾರೆ. ಚರ್ಚೆಯ ಸಮಯದಲ್ಲಿ ರಾಜೇಂದ್ರ ಕುಮಾರ್ ಅವರ ದುರಂಹಕಾರದ ವರ್ತನೆಯನ್ನು ಖಂಡಿಸಿ ಕೆಲವೊಂದು ಪ್ರಮುಖ ತೀರ್ಮಾನವನ್ನು ಕೂಡಾ ತೆಗೆದುಕೊಂಡಿದ್ದಾರೆ. ಮೊದಲನೆಯದಾಗಿ ರಾಜೇಂದ್ರ‌ಕುಮಾರ್ ಜೊತೆ ಪತ್ರಕರ್ತರ ಜಿಲ್ಲಾ ಸಂಘವಾಗಲಿ, ಪ್ರೆಸ್ ಕ್ಲಬ್ ಆಗಲಿ ಯಾವುದೇ ರೀತಿಯಾದ ವ್ಯಾವಹಾರಿಕ ಒಡನಾಟ ಇಟ್ಟುಕೊಳ್ಳಬಾರದು ಹಾಗೂ ಪತ್ರಕರ್ತರ ಎಲ್ಲಾ ಕಾರ್ಯಕ್ರಮಗಳಿಂದಲೂ ಅವರನ್ನು […]

ಪತ್ರಕರ್ತರಿಗೆ ಅವಮಾನ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್| ದುರಹಂಕಾರದ ವರ್ತನೆಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘ ಖಂಡನೆ| ಪತ್ರಿಕಾಗೋಷ್ಠಿಯಲ್ಲಿ ಹಲವು ಬದಲಾವಣೆಗೆ ತೀರ್ಮಾನ Read More »

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮಗ್ರ ನ್ಯೂಸ್: ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಎಪ್ರಿಲ್‌ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆ ವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ವಾಟ್ಸ್‌ಆಯಪ್‌ ಸಂದೇಶ

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ Read More »

ಹವಾಮಾನ ವರದಿ| ರಾಜ್ಯಾದ್ಯಂತ ‌ಅಲ್ಲಲ್ಲಿ ಎ.6ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು

ಹವಾಮಾನ ವರದಿ| ರಾಜ್ಯಾದ್ಯಂತ ‌ಅಲ್ಲಲ್ಲಿ ಎ.6ರವರೆಗೆ ಭಾರೀ ಮಳೆ ಸಾಧ್ಯತೆ Read More »

ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ

ಸಮಗ್ರ ನ್ಯೂಸ್: ಸಾಲಗಳ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ ಭಾರಿ ಅಕ್ರಮ ಶಂಕೆ ವ್ಯಕ್ತವಾದ ಹಿನ್ನೆಲೆ 5 ಲಕ್ಷ ರೂ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಡಾ. ಎಂ.ಎನ್​ ರಾಜೇಂದ್ರ ಕುಮಾರ್ ಅಧ್ಯಕ್ಷತೆಯ ಮಂಗಳೂರು ಡಿಸಿಸಿ ಬ್ಯಾಂಕ್,​ ಆರ್​​ಬಿಐ ನಿಯಮ ಉಲ್ಲಂಘಿಸಿ ತನ್ನ ನಿರ್ದೇಶಕರಿಗೆ ಸಾಲ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರ್​ಬಿಐನಿಂದ ಡಿಸಿಸಿ ಬ್ಯಾಂಕ್ ಸಾಲಗಳ ಬಗ್ಗೆ ಉನ್ನತ ತನಿಖೆ ಸಾಧ್ಯತೆ

ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ Read More »

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ| ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆಗೆ ಐವರು ಬಲಿ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ| ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆಗೆ ಐವರು ಬಲಿ Read More »

2025-26ನೇ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ| ಎ.11ರಿಂದ‌ ಬೇಸಿಗೆ ರಜೆ; ಮೇ.29ರಿಂದ ಶಾಲಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ 2025-26ನೆ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಎ.11ರಿಂದ ಬೇಸಿಗೆ ರಜೆ ಆರಂಭವಾಗಲಿದೆ. ಮೇ 29ರಿಂದ ಶಾಲೆಗಳು ಪುನಾರಾರಂಭಗೊಳ್ಳಲಿವೆ. 2025-26ನೆ ಸಾಲಿನ ಶಾಲಾ ಕರ್ತವ್ಯದ ದಿನಗಳ ಮೊದಲನೆ ಅವಧಿಯು ಮೇ 29ರಿಂದ ಸೆ.19ರವರೆಗೆ ಇರಲಿದೆ. ದಸರಾ ರಜೆ ಸೆ.20ರಿಂದ ಅ.7ರವರೆಗೆ ಇರುತ್ತದೆ. ಶಾಲಾ ಕರ್ತವ್ಯದ ದಿನಗಳ ಎರಡನೆ ಅವಧಿಯು ಅ.8ರಿಂದ 2026ರ ಎ.10ರವರೆಗೆ ಇರಲಿದೆ. ಬೇಸಿಗೆ ರಜೆಯು ಎ.11ರಿಂದ ಎ.28ರವರೆಗೆ ಇರುತ್ತದೆ.

2025-26ನೇ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ| ಎ.11ರಿಂದ‌ ಬೇಸಿಗೆ ರಜೆ; ಮೇ.29ರಿಂದ ಶಾಲಾರಂಭ Read More »

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..!

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿಗಳು ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಇದರೊಂದಿಗೆ ಅವರು 15 ಬಾರಿ ಕರಗ ಹೊತ್ತಂತಾಗಲಿದೆ. ಬೆಂಗಳೂರಿನ ಇತಿಹಾಸ ಸಾರುವ ಐತಿಹಾಸಿಕ ಕರಗ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ. ಧರ್ಮರಾಯ ಸ್ವಾಮಿ ದೇವಸ್ಥಾನದ ಕರಗ ಮಹೋತ್ಸವಕ್ಕೆ ರಾತ್ರಿ10 ಗಂಟೆಗೆ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..! Read More »

ತಮಿಳುನಾಡು ಬಿಜೆಪಿ‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು

ತಮಿಳುನಾಡು ಬಿಜೆಪಿ‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ Read More »

ತವರಲ್ಲಿ ಅಬ್ಬರಿಸಿದ ಕೆಕೆಆರ್| ಸನ್ ರೈಸರ್ಸ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 80 ರನ್‌ಗಳ ಭಾರಿ ಗೆಲುವು ಸಾಧಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ಬ್ಯಾಟಿಂಗ್ ಮತ್ತು ಬೌಲಿಂಗ್ ಅಬ್ಬರಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಅಕ್ಷರಶಃ ತತ್ತರಿಸಿತು. ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು

ತವರಲ್ಲಿ ಅಬ್ಬರಿಸಿದ ಕೆಕೆಆರ್| ಸನ್ ರೈಸರ್ಸ್ ಗೆ ಹೀನಾಯ ಸೋಲು Read More »

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ತನ್ನ ಮೇಲೆ FIR ದಾಖಲಾಗಿದಕ್ಕೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..! Read More »