April 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಆರೋಪ ಹೊರಿಸಿದೆ. ಇದರೊಂದಿಗೆ, ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾದ ಒಟ್ಟು ಆರೋಪಿಗಳ ಸಂಖ್ಯೆ 27ಕ್ಕೆ ಏರಿದ್ದು, ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ. ಆರೋಪಪಟ್ಟಿ ಸಲ್ಲಿಸಲಾದ ನಾಲ್ವರಲ್ಲಿ ಮೂವರು […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA Read More »

ಹಸೆಮಣೆ ಏರಲು ಸಜ್ಜಾದ ‘ಸೀತಾರಾಮ’ ಖ್ಯಾತಿಯ ನಟಿ ವೈಷ್ಣವಿ ಗೌಡ

ಸಮಗ್ರ ನ್ಯೂಸ್: ಅಗ್ನಿ ಸಾಕ್ಷಿ ಹಾಗೂ ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಅಕಾಯ್‌ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು. ವೈಷ್ಣವಿ ಗೌಡ ಮತ್ತು ಅಕಾಯ್‌ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಅಕಾಯ್‌ ಅವರು ಬೇರೆ ರಾಜ್ಯದವರು ಎನ್ನಲಾಗಿದೆ. ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕಾಯ್‌ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್‌ಶೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಶಿಯಲ್‌ ಮೀಡಿಯಾದಲ್ಲಿ

ಹಸೆಮಣೆ ಏರಲು ಸಜ್ಜಾದ ‘ಸೀತಾರಾಮ’ ಖ್ಯಾತಿಯ ನಟಿ ವೈಷ್ಣವಿ ಗೌಡ Read More »

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ನಡೆಸುವ 2025ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು(ಸಿಇಟಿ) ಎ.15, ಎ.16 ಮತ್ತು ಎ.17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ 3.31 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ನಾಳೆ(ಎ.15) ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಎ.16ರಂದು ಭೌತ ವಿಜ್ಞಾನ

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ Read More »

ಹವಾಮಾನ ಸಮಾಚಾರ| ಕರಾವಳಿ, ದ. ಒಳನಾಡು ಸೇರಿ ರಾಜ್ಯದಾದ್ಯಂತ 4 ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮುಂದಿನ 4 ದಿನಗಳವರೆಗೆ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಇನ್ನು ಏ.15ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ,

ಹವಾಮಾನ ಸಮಾಚಾರ| ಕರಾವಳಿ, ದ. ಒಳನಾಡು ಸೇರಿ ರಾಜ್ಯದಾದ್ಯಂತ 4 ದಿನ ಮಳೆ ಮುನ್ಸೂಚನೆ Read More »

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 500 ರೂ. ದಾಟಿದ ಬೆನ್ನಲ್ಲೇ ಇದೀಗ ಸಿಂಗಲ್‌ ಚೋಲ್‌ ಧಾರಣೆಯು ಕೆ.ಜಿ.ಗೆ 500 ರೂ.ದಾಟಿ ದಾಖಲೆ ನಿರ್ಮಿಸಿದೆ. ಹೊಸ ಅಡಿಕೆ ಧಾರಣೆಯು ಶೀಘ್ರವೇ 500 ರೂ. ತಲುಪುವ ನಿರೀಕ್ಷೆಯಿದೆ. ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು ಇದರ ಪರಿಣಾಮ ಧಾರಣೆ ಏರಿಕೆಯಾಗಿದೆ. ಧಾರಣೆ ಇನ್ನಷ್ಟು ಏರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಬ್ಬಲ್‌ ಚೋಲ್‌ ಧಾರಣೆ ಹತ್ತು ದಿನಗಳ

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ Read More »

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1948ರಲ್ಲಿ ಬ್ಯಾಂಕ್

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ Read More »

ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!?

ಸಮಗ್ರ ನ್ಯೂಸ್: ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಎ.14ರಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ. 2024ರ ಜೂನ್ ನಲ್ಲಿ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಿದ್ದು, ಈಗ ಯಾವುದೇ ಮುನ್ಸೂಚನೆ ನೀಡದೆ ಏಪ್ರಿಲ್ 1ರಿಂದ ಏಕಾಏಕಿ ಎರಡು ರೂಪಾಯಿ ದರ ಹೆಚ್ಚಳ ಮಾಡಿ ಲಾರಿ ಉದ್ಯಮದ ಮೇಲೆ ಬರೆ ಎಳೆದಿದೆ ಎಂದು ದೂರಲಾಗಿದೆ.

ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!? Read More »

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಸಮಗ್ರ ನ್ಯೂಸ್: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. ‘ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ.

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ Read More »

ಉದ್ಯೋಗ ಅಕಾಂಶಿಗಳಿಗೆ ಶುಭಸುದ್ದಿ*ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ನೆಸ್ಟೋ ಹೈಪರ್‌ಮಾರ್ಕೆಟ್ ಕಂಪನಿಯ ನೇರಸಂದರ್ಶನ.*

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಕುವೈತ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ *NESTO HYPERMARKET* ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂಶರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ *(19/04/2025)* ಶನಿವಾರ ನಡೆಸಲಿದೆ. ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ 21

ಉದ್ಯೋಗ ಅಕಾಂಶಿಗಳಿಗೆ ಶುಭಸುದ್ದಿ*ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ನೆಸ್ಟೋ ಹೈಪರ್‌ಮಾರ್ಕೆಟ್ ಕಂಪನಿಯ ನೇರಸಂದರ್ಶನ.* Read More »

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ)

ಸಮಗ್ರ ನ್ಯೂಸ್: ರವಿಯು ತನ್ನ ಉಚ್ಚ ರಾಶಿಗೆ ಅಂದರೆ ಮೇಷ ರಾಶಿಗೆ ಪ್ರವೇಶ ಮಾಡುವನು. ರವಿ ದಶೆ ಇದ್ದವರಿಗೆ ಇದು ಒಳ್ಳೆಯದು. ಅದಿಲ್ಲವಾದರೆ ಸ್ಥಾನವಶದಿಂದ ರವಿಯು ಅವಕೃಪೆಗೆ ಪಾತ್ರರಾಗುವಿರಿ. ರವಿಯು ಆರೋಗ್ಯ ಕಾರಕನಾದ ಕಾರಣ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚು. ಈ ವಾರ ಯಾವ ರಾಶಿಗೆ ಏನು ಫಲ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ: ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಮಿಶ್ರಫಲ. ರವಿಯು ನಿಮ್ಮ ರಾಶಿಗೆ ಬರಲಿದ್ದು, ಅತಿಯಾದ ದೇಹಾಯಾಸವಾಗಲಿದೆ. ಕೂಡಿದ ಹಣ ಕಾರಣಾಂತರಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ) Read More »