May 2025

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025

ಸಮಗ್ರ ನ್ಯೂಸ್: ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಓಪಲ್ ಸುಚಾತ ಮಿಸ್ ವರ್ಲ್ಡ್ ಆಗಿ ಹೊರಹೊಮ್ಮಿದ್ದಾರೆ. ಥೈಲ್ಯಾಂಡ್‌ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಜೇತರಾಗುವ ಮೂಲಕ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ […]

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025 Read More »

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಬ್ಯಾನ್| 21ವರ್ಷಕ್ಕಿಂತ ಕೆಳಗಿನವರಿಗೆ ಸಿಗಲ್ಲ ಬೀಡಿ, ಸಿಗರೇಟ್| ತಪ್ಪಿದ್ರೆ ಬೀಳುತ್ತೆ ಭಾರೀ ದಂಡ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ವಿಶ್ವ ತಂಬಾಕು ರಹಿತ ದಿನದಂದು ‘ಸಾರ್ವಜನಿಕ ಆರೋಗ್ಯ’ ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌- ಬೀಡಿ ಜೊತೆಗೆ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನೂ ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೂ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದ ಕೂಡ ಮನ್ನಣೆ ದೊರೆತಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದಲ್ಲಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಬ್ಯಾನ್| 21ವರ್ಷಕ್ಕಿಂತ ಕೆಳಗಿನವರಿಗೆ ಸಿಗಲ್ಲ ಬೀಡಿ, ಸಿಗರೇಟ್| ತಪ್ಪಿದ್ರೆ ಬೀಳುತ್ತೆ ಭಾರೀ ದಂಡ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ಮೂಡಿಗೆರೆ: ರಸ್ತೆ ಮಧ್ಯೆ ಬರ್ತ್‌ಡೇ ಪಾರ್ಟಿ ಆಚರಿಸಿದ ಬೆಳ್ತಂಗಡಿಯ 9 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ನಿಂತು ವಾಹನದ ಮೇಲೆ ಗೆಳೆಯರು ಸೇರಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರ ವಿರುದ್ಧ ಸ್ಥಳೀಯ ಪೊಲೀಸರು 9 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಮಡಂತ್ಯಾರ್‌ ಗ್ರಾಮದ ರೋಹಿತ್‌ ಪೈ (19) ಎಂಬಾತನ ಹುಟ್ಟುಹಬ್ಬದ ಪ್ರಯುಕ್ತ ಮೇ 28ರಂದು ರಾತ್ರಿ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ಕೇಕ್‌ ಕತ್ತರಿಸಿ ಬಳಿಕ ಮುಖಕ್ಕೆ ಬಳಿದುಕೊಂಡು ಕಿರುಚಾಡುತ್ತಿದ್ದುದನ್ನು ರಾತ್ರಿ ಕರ್ತವ್ಯದಲ್ಲಿದ್ದ ಬಣಕಲ್‌ ಪೊಲೀಸರು ಘಟನೆ ಕಂಡು ಪರಿಶೀಲನೆ

ಮೂಡಿಗೆರೆ: ರಸ್ತೆ ಮಧ್ಯೆ ಬರ್ತ್‌ಡೇ ಪಾರ್ಟಿ ಆಚರಿಸಿದ ಬೆಳ್ತಂಗಡಿಯ 9 ಮಂದಿ ವಿರುದ್ದ ಪ್ರಕರಣ ದಾಖಲು Read More »

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಇತ್ತೀಚೆಗೆ ಬಿಡುಗಡೆಗೊಂಡ ಹಾಸ್ಯಮಯ ಮನೋರಂಜನೆಯ ಕೊಂಕಣಿ ಚಲನಚಿತ್ರ ಜೆವಣ್ ಮೇ.30 ರಂದು ಕುವೈಟ್ ನಲ್ಲಿ ಪ್ರದೃಶಿಸಲ್ಪಟ್ಟಿತು. GSB ಸಭಾ ಕುವೈಟ್ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಸೇರಿ ಚಲನ ಚಿತ್ರ ವೀಕ್ಷಿಸಿದರು.ಪ್ರಥಮ ಬಾರಿಗೆ ಈ ಚಿತ್ರ ವಿದೇಶದಲ್ಲಿ ಬಿಡುಗಡೆಗೊಂಡಿದೆ. GSB ಸಮಾಜ ಭಾಂದವರು ಚಿತ್ರವನ್ನು ಪ್ರಶಂಸಿಸಿದರು. ಸಭೆಯ ಅಧ್ಯಕ್ಷ ಡಾ.ಸುರೇಂದ್ರ ನಾಯಕ್ ಕಾಪಾಡಿ ಅವರು ಸೇರಿರುವ ಎಲ್ಲರನ್ನೂ ಸ್ವಾಗತಿಸಿದರು.ಕೊಂಕಣಿ ಭಾಷೆಯ ಚಿತ್ರಗಳನ್ನು ನೋಡಿ ಮಾತೃ ಭಾಷೆಯ ಪ್ರೋತ್ಸಾಹ ಅತೀ ಅಗತ್ಯ ಎಂದು ನುಡಿದರು.ಗೋಕುಲದಾಸ್ ಭಟ್ ಬೆಳ್ತಂಗಡಿ

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ Read More »

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ. ಹಿಂದೂ ಕಾರ್ಯಕರ್ತ

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು(ಮೇ.31) ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ Read More »

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ

ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿದ್ದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟ ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ

ಸಮಗ್ರ ನ್ಯೂಸ್: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ನಿವಾಸಿ ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ವಿಜೇಶ್ ಅವರು HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಮೃತ ವಿಜೇಶ್ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ.

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ Read More »