ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಸಾಜ್ ಪಾರ್ಲರ್ ಹೆಸರಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಾಗೂ ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯಾ ವಸಂತ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.

Ad Widget .

ಆನಂದ ಗುರೂಜೀ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮತ್ತು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಗುರೂಜೀ ದೂರು ದಾಖಲಿಸಿದ್ದಾರೆ.

Ad Widget . Ad Widget .

ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿರುವ ಆನಂದ ಗುರೂಜೀ ತಮ್ಮನ್ನು, ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿದ್ದಾರೆ ಎಂದು ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ವಿರುದ್ಧ FIR ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಹಲವು ಯುಟ್ಯೂಬ್ ಚಾನೆಲ್​​​ಗಳ ಮೂಲಕ ಮಾನಹಾನಿ, ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಗುರೂಜೀ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *