ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಗಳಲ್ಲಿ ಭಾಗವಹಿಸುತ್ತಿದ್ದ, ಲವಲವಿಕೆಯಲ್ಲಿದ್ದ ಬಸವ ಶನಿವಾರ(ಮೇ.17) ಸಂಜೆ ಹೃದಯಾಘಾತದಿಂದ ಮೃತಪಟ್ಟಿದೆ.
ದೇವಾಲಯದ ಉತ್ಸವಗಳಲ್ಲಿ ಬೆಳ್ಳಿ ಆಭರಣಗಳನ್ನು ಧರಿಸಿ ದೇವರ ಮುಂದೆ ಸಾಗುತ್ತ ಭಕ್ತರ ಆಕರ್ಷಣೆಗೆ ಒಳಗಾಗಿತ್ತು. ಬಸವನ ಮೃತ ದೇಹವನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಅಂತಿಮ ವಿಧಿಯನ್ನು ನೆರವೇರಿಸಿದರು.