ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ.

Ad Widget . Ad Widget . Ad Widget .

ಅವಿನಾಶ್ (32) ಬಂಧಿತ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು.

Ad Widget . Ad Widget .

4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಬುಧವಾರ ಮಧ್ಯಾಹ್ನ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬಳಿಕ ಕೋಪಗೊಂಡ ಪತಿ ಚಾಕುವಿನಿಂದ ಹತ್ತು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದ, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಅದರಂತೆ ರಾಜೇಶ್ ನೇತೃತ್ವದ ಸ್ಪೆಷಲ್ ಟೀಮ್ ನಿಂದ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶದಲ್ಲಿ ಆರೋಪಿ ಅವಿನಾಶ್ ನನ್ನ ಬಂಧಿಸಿದ್ದಾರೆ.

Leave a Comment

Your email address will not be published. Required fields are marked *