ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಬಂಧಿತ ಆರೋಪಿಗಳ ವಿವರ ಬಹಿರಂಗಪಡಿಸಿದ ‌ಪೊಲೀಸರು

ಸಮಗ್ರ ನ್ಯೂಸ್: ಮೇ 27 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೇ 29 ರಂದು(ಗುರುವಾರ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget . Ad Widget . Ad Widget .

ಬಂಧಿತರನ್ನು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎಂದು ಗುರುತಿಸಲಾಗಿದೆ.

Ad Widget . Ad Widget .

ಮೂವರನ್ನು ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣದ ತನಿಖೆಗಾಗಿ 5 ಪೊಲೀಸರ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.

Leave a Comment

Your email address will not be published. Required fields are marked *