ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಿಸಲಾಗಿದೆ.
ದ.ಕ ಜಿಲ್ಲಾ ಎಸ್ ಪಿ ಯತೀಶ್ ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ ಪಿಯಾಗಿ ಅರುಣ್ ಅವರನ್ನು ನೇಮಿಸಲಾಗಿದೆ. ಉಡುಪಿ ನೂತನ ಕಮಿಷನರ್ ಆಗಿ ಹರಿರಾಮ್ ಶಂಕರ್ ರನ್ನು ನೇಮಿಸಿ ಆದೇಶಿಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ.