ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget . Ad Widget . Ad Widget .

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ ಮನೆಯ ಹಿಂದಿನ ಕಟ್ಟಡ ಕುಸಿದು ಆರು ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ.

Ad Widget . Ad Widget .

ಇನ್ನು ಬೆಳ್ತಂಗಡಿ ತಾಲೂಕಿನ ಓಡಿನ್ನಾಳದಲ್ಲಿ ಟಿಸಿ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರ ವಿಜೇಶ್ ಜೈನ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ. ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಸೂಚನೆ ನೀಡಿದ್ದರು ಇಂದು ಇಬ್ಬರು ಮೀನುಗಾರರು ಸಮುದ್ರಕ್ಕೆ ಮೀನು ಹಿಡಿಯಲು ತೆರಳಿದಾಗ ನೀರು ಪಾಲಾಗಿರುವ ಘಟನೆ ನಡೆದಿದೆ. ಯಶವಂತ್ ಮತ್ತು ಕಮಲಾಕ್ಷ ಎನ್ನುವವರು ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿದ್ದಾರೆ. ಇದೀಗ ಮೃತಪಟ್ಟ ಐವರ ಕುಟುಂಬಗಳಿಗೆ ತಲ 6 ಲಕ್ಷ ಪರಿಹಾರ ಪರಿಹಾರ ನೀಡುವುದಾಗಿ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

Leave a Comment

Your email address will not be published. Required fields are marked *