May 2025

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಬೈ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ‌ ಮಾತನಾಡುವ ವೇಳೆ ಈ ವಿಷಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು. ಸಹಕಾರ ಕ್ಷೇತ್ರವು ಪಟ್ಟಭದ್ರ ಹಿತಾಸಕ್ತಿಗಳ ಹಿಡಿತದಿಂದ ಮುಕ್ತಗೊಳಿಸುವ ಸಲುವಾಗಿ ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ […]

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ Read More »

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’, ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ Read More »

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು.ಆಗ ಮಾತನಾಡಿದ ಡಿಸಿಎಂ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು.

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್ Read More »

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರು ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ‌ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಸೋಮವಾರ ಸಂಜೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ Read More »

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿ ಶಮಂತ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಖ್ಯಾತಿಯ ಶಮಂತ್ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರೋ ಗೌಡ ಅವರು ಈ ವರ್ಷ ಫೆಬ್ರವರಿ 14 ಪ್ರೇಮಿಗಳ ದಿನದಂದೇ ನಿಶ್ಚಿತಾರ್ಥ ಮಾಡಿಕೊಂಡು ಎಲ್ಲರಿಗೂ ಶಾಕ್ ಕೊಟ್ಟರು. ಮೇಘನಾ ಪ್ರೊಫೆಷನಲ್ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಮೊನ್ನೆಯಷ್ಟೆ ಶಮಂತ್​ ಬ್ರೋ ಗೌಡ ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ದ ಕಾರಣ ತಿಳಿದು ಬಂದಿದೆ. ಯುವತಿ ಆಕಾಂಕ್ಷಾ ಎಸ್ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಮೇ.17 ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್ Read More »

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು – ಬೆಂಗಳೂರು ರಾ.ಹೆದ್ದಾರಿಯ ಶಿರಾಡಿ ಘಾಟ್ ನ ಗುಂಡ್ಯದಲ್ಲಿ ನಡೆದಿದೆ. ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ Read More »

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾಚಾರ ನಡೆದಿಲ್ಲವೆಂಬುದು ಎಫ್​ಎಸ್​ಎಲ್ (FSL)​ ವರದಿಯಲ್ಲಿ ಧೃಡಪಟ್ಟಿದೆ. ರಾಮನಗರ ತಾಲೂಕಿನ ಭದ್ರಾಪುರ ‌ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊಲೆ ಅಲ್ಲ, ರೈಲು

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ‌ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್​​ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್​ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು Read More »