May 2025

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಬೀಸಲಿದ್ದು, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಮೇ 19ರಂದು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ […]

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ

ಸಮಗ್ರ ನ್ಯೂಸ್: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್.ಆರ್ ನಾಯಕ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ. ಎಸ್.ಆರ್. ನಾಯಕ್ 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ Read More »

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಬೆಲೆ ಏರಿಕೆ ಬಿಸಿ ನಡುವೆಯೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಕಾದಿದೆ. ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ. ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ Read More »

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!!

ಸಮಗ್ರ ನ್ಯೂಸ್: ಅದು 13 ವರ್ಷದ ಹಿಂದಿನ ಕಥೆ ಒಡಿಶಾದ ಮಹಿಳೆಯೊಬ್ಬಳು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಚರಂಡಿಯಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡಿದ್ದಳು. ಹುಟ್ಟಿ ಬಹುಶಃ ಮೂರು ದಿನಗಳಾಗಿತ್ತು. ಆ ಮಗುವನ್ನು ತನ್ನ ಮಗುವಿನ ರೀತಿಯಲ್ಲೇ ಆಕೆ ಸಾಕಿದ್ದಳು. ಆದರೆ, 13 ವರ್ಷಗಳ ನಂತರ ಅದೇ ಹುಡುಗಿ ತನ್ನ ಇಬ್ಬರು ಬಾಯ್‌ಫ್ರೆಂಡ್‌ಗಳ ಸಹಾಯದಿಂದ ದತ್ತು ತಾಯಿಯನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿ ತನ್ನ ಇಬ್ಬರು

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!! Read More »

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ

ಸಮಗ್ರ ನ್ಯೂಸ್: ಹೆಂಡತಿ ಮೊದಲ ಮದುವೆಯ ವಿಷ್ಯ ಕಂಡುಹಿಡಿಯಲೇ ತಾನೇ ಗೂಢಾಚಾರಕನಾದ ಮಂಗಳೂರು ಟೆಕ್ಕಿಯ ಕಥೆ ಇದು. ಆತ ಸಾಫ್ಟ್‌ವೇರ್ ಇಂಜಿನಿಯರ್, ಕೈತುಂಬ ಸಂಬಳ ತೆಗೆದುಕೊಂಡು ಆರಾಮ ಬದುಕು ಕಟ್ಟಿಕೊಂಡಿದ್ದ. ಆದರೆ ಆತನ ಬದುಕಿಗೆ ಒಬ್ಬ ಹೆಣ್ಣು ಬಂದಳು. ಆಕೆ ಕೂಡ ಟೆಕ್ಕಿಯಾಗಿದ್ದಳು. ಮದುವೆಯಾದ ಬಳಿಕ ಹೆಂಡತಿಯ ಚಲನವಲನದ ಮೇಲೆ ಗಂಡನಿಗೆ ಅನುಮಾನ ಬಂದಿದೆ. ಹೀಗಾಗಿ ಉದ್ಯೋಗದ ಸೋಗಿನಲ್ಲಿ ಝೂಮ್‌ ಮೀಟಿಂಗ್‌ ನಲ್ಲಿ ಪತ್ನಿಯನ್ನು ಅಪರಿಚಿತನಂತೆ ಮಾತನಾಡಿಸಿದಾಗ ಅದಾಗಲೇ ಆಕೆಗೆ ಮೊದಲು ಮದುವೆಯಾಗಿದೆ ಎಂಬುದನ್ನು ಕಂಡು ಹಿಡಿದಿದ್ದಾನೆ.

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ Read More »

ಸಿಎಂ ಮಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಮತ್ತೋರ್ವ ಯುವಕನಿಗೆ ಚಾಕು ಇರಿತ| ನಾಲ್ವರ ತಂಡದಿಂದ ಬಂಟ್ವಾಳದಲ್ಲಿ ಕೃತ್ಯ

ಸಮಗ್ರ ನ್ಯೂಸ್: ಬಂಟ್ವಾಳದ ಪಾಣೆ ಮಂಗಳೂರಿನ ಅಕ್ಕರಂಗಡಿಯಲ್ಲಿ ತಂಡವೊಂದು ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಯುಧದಿಂದ ದಾಳಿ ನಡೆಸಿದ್ದು, ಕೈಗೆ ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ. ಮಂಗಳೂರಿಗೆ ಸಿಎಂ ಭೇಟಿ ನೀಡಿದ ಬೆನ್ನಲ್ಲೇ ಈ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ. ಅಕ್ಕರಂಗಡಿ ನಿವಾಸಿ ಹಮೀದ್‌ ಯಾನೆ ಅಮ್ಮಿ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ರಸ್ತೆ ಬದಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಹಮೀದ್‌ ಅವರು ಪೈಂಟಿಂಗ್‌

ಸಿಎಂ ಮಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಮತ್ತೋರ್ವ ಯುವಕನಿಗೆ ಚಾಕು ಇರಿತ| ನಾಲ್ವರ ತಂಡದಿಂದ ಬಂಟ್ವಾಳದಲ್ಲಿ ಕೃತ್ಯ Read More »

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು.

ಸಮಗ್ರ ನ್ಯೂಸ್: ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿರುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೀಗ ಸುಪ್ರೀಂ ಕೋರ್ಟ್‌ನ ಮುಂದೆ 14 ಪ್ರಶ್ನೆಗಳನ್ನು ಇರಿಸಿದ್ದಾರೆ. ಸಂವಿಧಾನದಲ್ಲಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಅವಕಾಶ ಇಲ್ಲದಿದ್ದರೂ ನ್ಯಾಯಾಲಯದ ನೀಡಿರುವ ಆದೇಶ ಪ್ರಶ್ನಿಸಿರುವ ರಾಷ್ಟ್ರಪತಿ, ತಮ್ಮ ವಿಶೇಷಾಧಿಕಾರ ಬಳಸಿ ಸುಪ್ರೀಂಗೆ 14 ಪ್ರಶ್ನೆ ಕೇಳಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಏ.8ರಂದು ಮಹತ್ವದ

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು. Read More »

ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ ಹೆಚ್ಚಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: 2025-26 ನೇ ಸಾಲಿನ ರಾಜ್ಯ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದಂತೆ ʼಆಶಾ ಕಾರ್ಯಕರ್ತೆಯರಿಗೆ ತಂಡಾಧಾರಿತ ಪ್ರೋತ್ಸಾಹಧನ 1000 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪವಿತ್ರಾ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ ಹೆಚ್ಚಿಸಿದ ರಾಜ್ಯ ಸರ್ಕಾರ Read More »

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ

ಸಮಗ್ರ ನ್ಯೂಸ್: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು. ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ Read More »