May 2025

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಹಾಗೂ ಸದರ್ ಉಸ್ತಾದರು ಮೇ 26ರಂದು ಮದ್ರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲು ದ.ಕ.ಜಿಲ್ಲಾ ವಕ್ಫ್ ಸಲಹಾ […]

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ Read More »

ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ

ಸಮಗ್ರ ನ್ಯೂಸ್: ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ.ಜಪಾನ್ ದೇಶವನ್ನು ಹಿಂದಿಕ್ಕಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆ‌ರ್ ಸುಬ್ರಹ್ಮಣ್ಯಂ ಘೋಷಣೆ ಮಾಡಿದ್ಧಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ದತ್ತಾಂಶವನ್ನು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆ‌ರ್ ಸುಬ್ರಹ್ಮಣ್ಯಂ ದೇಶದಲ್ಲಿ ದೊಡ್ಡ ಜಿಡಿಪಿಯಲ್ಲಿ ಅಮೆರಿಕಾ ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ನಾವು ನಾಲ್ಕನೇ ಅತಿದೊಡ್ಡ ಆರ್ಥಿಕತೆಯಲ್ಲಿ ಇದ್ದವೆ ನಮ್ಮ ಆರ್ಥಿಕತೆ 4 ಟ್ರಿಲಿಯನ್

ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ Read More »

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಗಳು ಏರಿಕೆ| ಲಾಕ್ ಡೌನ್ ಭೀತಿಯಲ್ಲಿ ಕರ್ನಾಟಕ!!

ಸಮಗ್ರ ನ್ಯೂಸ್: ದೇಶಾದ್ಯಂತ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತ ನಮ್ಮ ರಾಜ್ಯದಲ್ಲೂ ಈಗಾಗಲೇ ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್​​ಗೆ ಓರ್ವ ನಿನ್ನೆಯಷ್ಟೇ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 38ಕ್ಕೇರಿಕೆಯಾಗಿವೆ. ಈ ಕುರಿತು ಮಾತನಾಡಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಠಿಣ ನಿಮಯಗಳು ಜಾರಿ ಹಾಗೂ ಲಾಕ್​​ಡೌನ್​​​ ಜಾರಿ ಬಗ್ಗೆ ಸೂಕ್ಷ್ಮ ಸುಳಿವನ್ನು ನೀಡಿದ್ದಾರೆ. ಕೋವಿಡ್ ಪ್ರಕರಣಗಳ

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಗಳು ಏರಿಕೆ| ಲಾಕ್ ಡೌನ್ ಭೀತಿಯಲ್ಲಿ ಕರ್ನಾಟಕ!! Read More »

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್| ಮಹತ್ವದ ತೀರ್ಮಾನ ಕೈಗೊಂಡ ಸ್ಪೀಕರ್ ಖಾದರ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ. ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು. ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್| ಮಹತ್ವದ ತೀರ್ಮಾನ ಕೈಗೊಂಡ ಸ್ಪೀಕರ್ ಖಾದರ್ Read More »

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ| ಮಗು ಸಹಿತ ಪ್ರಯಾಣಿಕರು ಸಾವಿನ ದವಡೆಯಿಂದ‌ ಬಚಾವ್

ಸಮಗ್ರ ನ್ಯೂಸ್: ಪೆರಿಯಶಾಂತಿಯನ್ನು ಸಂಪರ್ಕಿಸುವ ಹೆದ್ದಾರಿಯ ನೂಜಿಬಾಳ್ತಿಲ ಸಮೀಪದ ಕನ್ವರೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 25ರ ಮಧ್ಯಾಹ್ನ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು (ಕೆಎ14ಎಂಬಿ0226) ಇದಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದು ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳದಲ್ಲಿದ್ದವರ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ| ಮಗು ಸಹಿತ ಪ್ರಯಾಣಿಕರು ಸಾವಿನ ದವಡೆಯಿಂದ‌ ಬಚಾವ್ Read More »

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ವಿರುದ್ದ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆಳ್ತಂಗಡಿ ನಗರದ ಜೂನಿಯರ್‌ ಕಾಲೇಜ್‌ ರಸ್ತೆಯಲ್ಲಿರುವ ರಾಮನಗರದ ವಿ.ಆರ್‌. ನಾಯಕ್‌ ಕಾಂಪೌಂಡ್‌ನಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು Read More »

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಒಂದು ವೇಳೆ ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜನಪ್ರಿಯ ಪಂಚಗ್ಯಾರಂಟಿ ಯೋಜನೆಗಳನ್ನು ಮೆಟ್ಟಿ ಪ್ರತಿಪಕ್ಷ ಬಿಜೆಪಿ ಮೊದಲ ಬಾರಿಗೆ ಸ್ವತಂತ್ರವಾಗಿ ಸ್ಪಷ್ಟ ಜನಾದೇಶ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಆರ್ಗನೈಸೇಷನ್ ಎಂಬ ಸರ್ಕಾರೇತರ ಸಂಸ್ಥೆಯೊಂದು, ಕೊಮೆಡೊ ಟೆಕ್ನಾಲಜೀಸ್ ಎಂಬ ಸಂಸ್ಥೆಯೊಂದಿಗೆ ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದೆ. ಆ ಸಮೀಕ್ಷೆಯ ವರದಿಯಂತೆ, ಕರ್ನಾಟಕದ ಪ್ರಸಕ್ತ ಸನ್ನಿವೇಶದಲ್ಲೇನಾದರೂ

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ Read More »

ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ. https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.-ಕೆಸಿಇಟಿ ಫಲಿತಾಂಶ

ಸಿಇಟಿ ಫಲಿತಾಂಶ ಪ್ರಕಟ Read More »

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ

ಸಮಗ್ರ ನ್ಯೂಸ್: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ Read More »

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು

ಸಮಗ್ರ ನ್ಯೂಸ್: ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ನಡೆಯಬೇಕಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ರದ್ದಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಸಂಜೆಯ ವೇಳೆಗೆ ಆ ದಿನವೇ ಗಣೇಶನ ದೇವಸ್ಥಾನದಲ್ಲಿ ಪಲ್ಲವಿ ಎಂಬ ಯುವತಿ ತನ್ನ ಪ್ರಿಯಕರ ರಘುವಿನ ಜೊತೆ ಹಸೆಮಣೆ ಏರಿದ ಘಟನೆ ಎಲ್ಲರ ಗಮನ ಸೆಳೆಯಿತು. ಬೆಳಗ್ಗೆ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿಯ ಮದುವೆ ಒಂದು ಯುವಕನ ಜೊತೆ ಆಗಬೇಕಿತ್ತು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ತಳಿರು ತೋರಣಗಳಿಂದ ಮಂಟಪವನ್ನು

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು Read More »