May 2025

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ

ಸಮಗ್ರ ನ್ಯೂಸ್: ಈ ಬಾರಿ ಮುಂಗಾರು ಪ್ರವೇಶ ಮಾಮೂಲಿಗಿಂತ ಮೊದಲೇ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್‌ ಪ್ರವೇಶಿಸಲಿದೆ. ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. […]

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ Read More »

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ

ಸಮಗ್ರ ನ್ಯೂಸ್: ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಆದಾಯದಲ್ಲಿ ಒಂದು ಪಾಲನ್ನು ‘ಸಾಮಾನ್ಯ ಸಂಗ್ರಹಣಾ ನಿಧಿ’ಗೆ ವರ್ಗಾಯಿಸಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ’ಯನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದಾರೆ. ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ‌ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು. ಆದರೆ, ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಪಾಲರು ವಾಪಸ್‌ ಕಳುಹಿಸಿದ್ದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ Read More »

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುತ್ತದೆ‌ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? Read More »

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ

ಸಮಗ್ರ ನ್ಯೂಸ್: ತಾಳಿ ಕಟ್ಟುವ ವೇಳೆ ವಧು ತಲೆ ಅಲ್ಲಾಡಿಸಿ ನನಗೆ ಈ ಮದುವೆ ಬೇಡ ಎಂದ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟೋ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ.

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ Read More »

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ

ಸಮಗ್ರ ನ್ಯೂಸ್: ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ, ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅದರಂತೆ ಪೊಲೀಸರು ಮಡೆನೂರು ಮನುವನ್ನು ವಶಕ್ಕೆ ಪಡೆದಿದ್ದರು. ಇಂದು ಮಡೆನೂರು ಅಭಿನಯದ ಚೊಚ್ಚಲ ಸಿನಿಮಾ

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ Read More »

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ

ಸುಳ್ಯ: ‘ಸುಳ್ಯದ ಪರಿಸರದಲ್ಲಿ ಭಾರಿ ದೊಡ್ಡ ಉದ್ಯಮ ಇಲ್ಲ, ಸುಮಾರು 50 ಕೋಟಿಗೂ ಹೆಚ್ಚಿನ ಜನರಿಗೆ ನಮ್ಮ ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಸಿಗುತ್ತಿದೆ. ಮುಂದೆ ಕೃಷ್ಟಿ ನಂತರ ಭವಿಷ್ಯದ ಉದ್ಯಮವೆಂದರೆ ಅದು ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು. ಉತ್ತರ ಭಾಗದಲ್ಲಿ ವಿವಿಧ ರೀತಿಯ ಜೇನನ್ನು ಉತ್ಪಾದನೆ ಮಾಡುತ್ತಾರೆ ಹಾಗೂ ಅದು ವಿದೇಶಗಳಿಗೆ ರಫ್ತು ಆಗುತ್ತವೆ ಹಾಗೆಯೇ ಇಲ್ಲಿ ಉತ್ಪಾದನೆ ಆಗುವಂತಹ ಜೇನಿನ ಚಾಕಲೇಟ್ ವಿದೇಶಗಳಿಗೆ ರಫ್ತು ಆಗಬೇಕು. ಹಾಗೆಯೇ ದ.ಕ ಕನ್ನಡದಲ್ಲಿ ಒಂದು ಗುಣಮಟ್ಟದ ಫುಡ್ ಟೆಸ್ಟಿಂಗ್

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ Read More »

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ

ಸಮಗ್ರ ನ್ಯೂಸ್: ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್​ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು. ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ Read More »

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಅವರ ಸಂಬಂಧಿಕನೇ ಚೂರಿಯಿಂದ ಇರಿದಿದ್ದು, ಗಾಯಾಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಯ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಮೃತರನ್ನು ವಾಮಂಜೂರಿನ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಅವರ ಇಬ್ಬರು ಪುತ್ರರಾದ ರಿಯಾಬ್ ಹಾಗೂ ಶಿಯಾಬ್ ಕೂಡ ಗಾಯಗೊಂಡವರು. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಅರೋಪಿ. ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ‘ಸುಲೇಮಾನ್ ಮದುವೆ

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ Read More »

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಸಮಗ್ರ ನ್ಯೂಸ್: ಪತ್ನಿಯ ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ಶುಭ ದಿನದಂದೇ ಪತಿ ಅನಿರೀಕ್ಷಿತವಾಗಿ ನಿಧನರಾದ ಅತ್ಯಂತ ವಿಷಾದನೀಯ ಘಟನೆ ಕನ್ಯಾನ ಗ್ರಾಮದ ಮಿತ್ತನಡ್ಕ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿ ಹಾಗೂ ಪಿಕಪ್ ವಾಹನ ಚಾಲಕರಾದ ಸತೀಶ್ (33 ವ) ಮೃತರಾದವರು. ತಮ್ಮ ಪತ್ನಿಯ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸತೀಶ್ ಅವರು ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಹಾಗೂ ತದನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸಾ

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ Read More »

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ

ಸಮಗ್ರ ನ್ಯೂಸ್: ತಂದೆಯ ಕೊಲೆಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಸುಪಾರಿ ನೀಡಿದ್ದಾರಾ? ಹೀಗಂತ ಅವರ ತಂದೆ ಬಾಲಕೃಷ್ಣ ಪೂಜಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಕಾಂತ್ ಕಶ್ಯಪ್ ಜೊತೆ ಚೈತ್ರಾ ಕುಂದಾಪುರ ಮದುವೆಯಾದಾಗಿನಿಂದ ತಂದೆ ಮತ್ತು ಮಗಳ ನಡುವೆ ವಾಗ್ವಾದ ಮಿತಿ ಮೀರಿದೆ. ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಗೆ ತಂದೆ ಬಾಲಕೃಷ್ಣ ಅವರು ದೂರು ನೀಡಿದ್ದು, ಆಸ್ತಿಗಾಗಿ ಚೈತ್ರಾ ಕುಂದಾಪುರ ನನ್ನನ್ನು ಕೊಲೆ ಮಾಡಬಹುದು. ಶ್ರೀಕಾಂತ್ ಮತ್ತು ಚೈತ್ರಾ ಇಬ್ಬರೂ ವಂಚಕರು, ಲಕ್ಷಾಂತರ ರೂಪಾಯಿ

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ Read More »