ಕಪ್‌ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್‌ಸಿಬಿ ಇದೀಗ ಚೊಚ್ಚಲ ಕಪ್ ಗೆದ್ದು ಬೀಗಿದೆ. ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ.

Ad Widget . Ad Widget . Ad Widget .

ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್ ಬಸ್ ನಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ.

Ad Widget . Ad Widget .

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಆರ್‌ಸಿಬಿ ರ‍್ಯಾಲಿ ನಡೆಸಲಾಗುತ್ತದೆ. ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ಅವರಿಗೆ ಆರ್‌ಸಿಬಿ ಬಾಯ್ಸ್ ರ‍್ಯಾಲಿ ನಡೆಸಲಿದ್ದಾರೆ. ಇಂದು(ಜೂ.4) ಸಂಜೆ 3.30ಕ್ಕೆ ವಿಜಯಯಾತ್ರೆಗೆ ಪ್ಲಾನ್ ಕೂಡ ಮಾಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Leave a Comment

Your email address will not be published. Required fields are marked *