ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ( ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್‌ ಸ್ಕೂಲ್‌ ನ ಮಾಲಕ.

Ad Widget . Ad Widget . Ad Widget .

ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್‌ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

Ad Widget . Ad Widget .

ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *