ರಾಜ್ಯಾದ್ಯಂತ ಭಾರೀ ಮಳೆ‌ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯು ಮತ್ತೆ ಅಬ್ಬರಿಸುವ ಲಕ್ಷಣಗಳಿದ್ದು, ಜೂನ್‌ 11 ರಿಂದ ಜೂನ್‌14ರ ವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಜೂನ್‌ 12 ರಿಂದ 14ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

Ad Widget . Ad Widget . Ad Widget .

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.12 ರಿಂದ 15ರವರೆಗೆ ‘ರೆಡ್ ಅಲರ್ಟ್’ ಘೋಷಿಸಿದೆ.

Ad Widget . Ad Widget .

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಯಾರ್‌ಝೋನ್‌ 15 ಡಿಗ್ರಿ ಉತ್ತರ ಅಕ್ಷಾಂಶದ ಉದ್ದಕ್ಕೂ ಇದ್ದು, 3.1 ಕಿ.ಮೀ ಹಾಗೂ 5.1 ಕಿ.ಮೀ ಎತ್ತರದ ಮಧ್ಯದಲ್ಲಿ ಇದೆ. ಇದರ ಪ್ರಭಾವದಿಂದ ಕರ್ನಾಟಕ ರಾಜ್ಯಾದ್ಯಂತ ಜೂನ್‌ 11ರಂದು ಹಲವು ಕಡೆ ಮಳೆಯಾಗಲಿದೆ. ಜೂನ್‌ 12 ರಿಂದ 16ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು, ಮಿಂಚು ಸಮೇತವಾಗಿ ಮಳೆಯಾಗಲಿದೆ. ಮಳೆಯ ಜೊತೆಗೆ ಗಾಳಿಯ ವೇಗವು ಸುಮಾರು 50 ಕಿ.ಮೀ ಇರಲಿದೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

Leave a Comment

Your email address will not be published. Required fields are marked *