ಉಡುಪಿ ಬಳಿಕ ದ.ಕ ದಲ್ಲಿ ಕೋಳಿ ಅಂಕ‌ದ ವಿರುದ್ಧ ತೊಡೆ ತಟ್ಟಿದ ಎಸ್.ಪಿ ಅರುಣ್| ಕಡಬದಲ್ಲಿ ಮೂವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget . Ad Widget .

ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 08 ಜನರು ಪರಾರಿಯಾಗಿದ್ದು, 03 ಜನರನ್ನು ವಶಕ್ಕೆ ಪಡೆಯಲಾಗಿರುತ್ತದೆ.

Ad Widget . Ad Widget .

ಸ್ಥಳದಲ್ಲಿದ್ದ 06 ಬೈಕ್, 02 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :44/2025 ಕಲಂ: 87, 93 KP Act ಹಾಗೂ 3,11 THE PREVENTION OF CRUELTY TO ANIMALS ACT, 1960 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *