ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ‌ ಶಾಕ್

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ.

Ad Widget . Ad Widget . Ad Widget .

ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಂಚಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಇದೀಗ ಈ ಹಣಕಾಸು ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲೆಯ ಪ್ರಮುಖ ರಾಜಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Ad Widget . Ad Widget .

ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ.

  • ಬಳ್ಳಾರಿ ಲೋಕಸಭಾ ಸಂಸದ – ತುಕಾರಾಂ (ಸಂಡೂರು)
  • ಬಳ್ಳಾರಿ ನಗರ ಶಾಸಕ – ಭರತ್ ರೆಡ್ಡಿ
  • ಕೂಡ್ಲಿಗಿ – ಶಾಸಕ ಡಾ. ಶ್ರೀನಿವಾಸ
  • ಕಂಪ್ಲಿ ಶಾಸಕ – ಗಣೇಶ
  • ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ – ನಾಗೇಂದ್ರರಿಗೆ ಇಡಿ ಶಾಕ್ ನೀಡಿದ್ದು ತನಿಖೆ ನಡೆಯುತ್ತಿದೆ.

ಇಡಿ ಅಧಿಕಾರಿಗಳು ಮೊದಲು ಸ್ಥಳೀಯ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಹಕಾರದೊಂದಿಗೆ ದಾಳಿ ಆರಂಭಿಸಿದ್ದು, ಹಣಕಾಸು ದಾಖಲೆಗಳು, ಬ್ಯಾಂಕ್‌ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಮುಂಗಡವಾಗಿದ್ದ ಅನುದಾನಗಳ ದುರ್ಬಳಕೆ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಆರೋಪಗಳು ಕೇಳಿಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ತನಿಖಾ ಸಂಸ್ಥೆ ಈ ಕ್ರಮಕೈಗೊಂಡಿದೆ

Leave a Comment

Your email address will not be published. Required fields are marked *