ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Ad Widget ... ..

ಪ್ರಕರಣ ಸಂಬಂಧ ಮನಗೂಳಿ ಕೆನರಾ ಬ್ಯಾಂಕ್ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಹುಬ್ಬಳ್ಳಿಯ ಗದಗ ರೋಡ್ ನ ಕೊಠಾರಿ ನಗರದ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿಜಯ್ ಕುಮಾರ್ ಮಿರಿಯಾಲ (41), ಹುಬ್ಬಳ್ಳಿಯ ಜನತಾ ಕಾಲೋನಿ
ಉದ್ಯೋಗಿ ಚಂದ್ರಶೇಖರ್ ನೆರೆಲ್ಲಾ (38) ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ್ ಮೋಕಾ (40) ಎಂಬುವವರನ್ನು ಬಂಧಿಸಲಾಗಿದೆ.

Ad Widget

ಬಂಧಿತರಿಂದ 10.75 ಕೋಟಿ ಮೌಲ್ಯದ 10.5 ಕೆಜಿ ಚಿನ್ನಾಭರಣ, ಬಂಗಾರದ ಗಟ್ಟಿ, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *