June 2025

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ

ಸಮಗ್ರ ನ್ಯೂಸ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ, ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ Read More »

ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದರು, ಅದರಂತೆ

ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ Read More »

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಗಳ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ಕುರಿತು ಸಹಾಯಕ ಆಯುಕ್ತರು ಆದೇಶ ಹೊರಡಿಸುವ ಕುರಿತು ವಿಚಾರಣೆ ದಿನಾಂಕ ನಿಗದಿಪಡಿಸಿದ್ದಾರೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾ‌ರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾ‌ರ್ ಪುತ್ತಿಲ

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್ Read More »

ಕಡಬ: ಕೋಮು ಸಾಮರಸ್ಯ ಕದಡಲು ಯತ್ನ ಆರೋಪ| 15 ಹಿಂದೂ ಕಾರ್ಯಕರ್ತರ ಮೇಲೆ‌ ಕೇಸ್

ಸಮಗ್ರ ನ್ಯೂಸ್: ಕೋಮುಸಾಮರಸ್ಯ ಕದಡುವಂತೆ ಮಾಡಿರುವ ಸಾಲು ಸಾಲು ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೂದು ಮುಚ್ಚಿದ ಕೆಂಡದಂತಹ ಸ್ಥಿತಿ ನಿರ್ಮಿಸಿದೆ. ಈ ನಡುವೆ 15 ಹಿಂದೂ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಅಬ್ದುಲ್ ರಹಿಮಾನ್ ಹತ್ಯೆ ಘಟನೆ ನಡೆದಿರುವ ಬೆನ್ನಲ್ಲೇ ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ

ಕಡಬ: ಕೋಮು ಸಾಮರಸ್ಯ ಕದಡಲು ಯತ್ನ ಆರೋಪ| 15 ಹಿಂದೂ ಕಾರ್ಯಕರ್ತರ ಮೇಲೆ‌ ಕೇಸ್ Read More »

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್

ಸಮಗ್ರ ನ್ಯೂಸ್: ಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್ Read More »