June 2025

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

ಸಮಗ್ರ ನ್ಯೂಸ್: ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ Read More »

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ| ನೂತನ ಡಿಸಿಯಾಗಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ| ನೂತನ ಡಿಸಿಯಾಗಿ ದರ್ಶನ್ ಎಚ್.ವಿ Read More »

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ನಂತೂರಿನ ತಾರೆತೋಟ ಬಳಿ ಸೋಮವಾರ ರಾತ್ರಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಫಿಸಿಯೋಥೆರಪಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೂಲತಃ ಕೇರಳದ ಆಲಪ್ಪುಝ ನಿವಾಸಿ ಡಾ.ಮುಹಮ್ಮದ್ ಅಮಲ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ. ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮುಹಮ್ಮದ್ ಅಮಲ್ ನಿನ್ನೆ ರಾತ್ರಿ 11:45ರ ಸುಮಾರಿಗೆ

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು Read More »

ಮಂಗಳೂರು: ಮಗುವನ್ನು ಬಲಿಪಡೆದ ಸೇದಿ ಬಿಸಾಡಿದ ಬೀಡಿ

ಸಮಗ್ರ ನ್ಯೂಸ್: : ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ ಮಗು ದಾರುಣ ಸಾವಿಗೀಡಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿ ಪುತ್ರ ಅನೀಶ್‌ ಎಂಬ ಮಗು ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮನೆಯ ನೆಲದಲ್ಲಿ ಬಿದ್ದಿದ್ದ ಬೀಡಿ ತುಂಡನ್ನು ಮಗು ನುಂಗಿತ್ತು. ಸ್ವಲ್ಪ ಹೊತ್ತಲ್ಲೇ ಅಸ್ವಸ್ಥಗೊಂಡ ಮಗುವನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ.ಘಟನೆಗೆ

ಮಂಗಳೂರು: ಮಗುವನ್ನು ಬಲಿಪಡೆದ ಸೇದಿ ಬಿಸಾಡಿದ ಬೀಡಿ Read More »

ವಲಸಿಗರ ಗಡೀಪಾರು ನೀತಿ/ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯದಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್‌: ವಲಸಿಗರ ಹೊರದಬ್ಬುವ ವಿರುದ್ಧ ಅಮೆರಿಕದ ಲಾಸ್‌ ಏಂಜೆಲೀಸ್‌ನಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಹಿಂಸಾತ್ಮಕ ಹೋರಾಟ ನಡೆದಿರುವ ನಡುವೆಯೇ, ‘ಟ್ರಂಪ್ ಓರ್ವ ಸವಾಧಿಕಾರಿ. ಅವರು ತೊಲಗಬೇಕು’ ಎಂದು ಆಗ್ರಹಿಸಿ ದೇಶದ 50 ರಾಜ್ಯಗಳಲ್ಲಿ ವಾರಾಂತ್ಯದ ವೇಳೆ ‘ನೋ ಕಿಂಗ್ಸ್’ (ಬೇಡ ಸರ್ವಾಧಿಕಾರ) ಹೆಸರಿನ ಭಾರಿ ಪ್ರತಿಭಟನೆಗಳು ನಡೆದಿವೆ. ನ್ಯೂಯಾರ್ಕ್‌, ಡೆನ್ವರ್‌, ಶಿಕಾಗೋ, ಆಸ್ಟಿನ್, ಮಿನ್ನೆಸೋಟ, ಟೆಕ್ಸಾಸ್‌, ಅಟ್ಲಾಂಟಾ ಮತ್ತು ಲಾಸ್ ಏಂಜಲೀಸ್‌ ಸೇರಿದಂತೆ 50 ರಾಜ್ಯಗಳ ಪ್ರಮುಖ ನಗರಗಳು ಹಾಗೂ ಚಿಕ್ಕಪುಟ್ಟ ಊರುಗಳಲ್ಲೂ ಲಕ್ಷಾಂತರ

ವಲಸಿಗರ ಗಡೀಪಾರು ನೀತಿ/ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯದಲ್ಲಿ ಪ್ರತಿಭಟನೆ Read More »

ಪುತ್ತೂರು: ಏಳು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಶ್ಮಾ (28) ಮೃತ ದುರ್ದೈವಿ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಶ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸುರತ್ಕಲ್ ಮೂಲದ ರೇಶ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ

ಪುತ್ತೂರು: ಏಳು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು Read More »

ಭಾರೀ ಮಳೆ ಮುನ್ಸೂಚನೆ ಹಿನ್ನಲೆ| ಜೂ.16ರಂದು ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಳೆ(ಜೂ.16) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ರಜೆ:ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜೂ.16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾಕುಮಾರಿ. ಕೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ

ಭಾರೀ ಮಳೆ ಮುನ್ಸೂಚನೆ ಹಿನ್ನಲೆ| ಜೂ.16ರಂದು ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ನಾಳೆ (ಜೂ.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜೂನ್ 16) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ಅದಾಗ್ಯೂ‌ ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ನಾಳೆ (ಜೂ.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ. ದ.ಕ‌ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ Read More »

ಉತ್ತರಾಖಂಡ್ ನಲ್ಲಿ ಹೆಲಿಕಾಪ್ಟರ್ ಪತನ| ಕೇದಾರನಾಥಕ್ಕೆ ತೆರಳುತ್ತಿದ್ದ 7 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ. ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.

ಉತ್ತರಾಖಂಡ್ ನಲ್ಲಿ ಹೆಲಿಕಾಪ್ಟರ್ ಪತನ| ಕೇದಾರನಾಥಕ್ಕೆ ತೆರಳುತ್ತಿದ್ದ 7 ಮಂದಿ ಸಾವು Read More »