June 2025

‘ಏರ್ ಇಂಡಿಯಾ’ ವಿಮಾನ ಪತನದ ಹಿಂದೆ ಟರ್ಕಿ ಕೈವಾಡವಿದ್ಯಾ? ಯೋಗಗುರು ಬಾಬಾ ರಾಮ್ ದೇವ್ ಅನುಮಾನ ವ್ಯಕ್ತಪಡಿಸಿದ್ದೇಕೆ?

ಸಮಗ್ರ ನ್ಯೂಸ್: ಅಹ್ಮದಾಬಾದ್ ವಿಮಾನ ದುರಂತದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಸಂಭಾವ್ಯ ವಿದೇಶಿ ಪಿತೂರಿಯ ಬಗ್ಗೆ ಆರೋಪಿಸಿದ್ದು,ಭಾರತದ ವಾಯುಯಾನ ಕ್ಷೇತ್ರದಲ್ಲಿ ವಿದೇಶಗಳ ಭಾಗಿಯಾಗುವಿಕೆಯ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪತನಗೊಂಡ ಏರ್ ಇಂಡಿಯಾ ವಿಮಾನದ ನಿರ್ವಹಣೆ ಮತ್ತು ಸುಸ್ಥಿತಿಯನ್ನು ತುರ್ಕಿಯಾದ ಕಂಪೆನಿಯೊಂದು ನೋಡಿಕೊಳ್ಳುತ್ತಿತ್ತು ಎಂಬ ಮಾಹಿತಿಯು ತನಗೆ ಲಭಿಸಿದೆ. ವಿಮಾನ ಅಪಘಾತವು ಸಂಪೂರ್ಣವಾಗಿ ಆಕಸ್ಮಿಕವಲ್ಲದಿರಬಹುದು ಎಂದರು. ಭಾರತವು ವಾಯುಯಾನ ವಲಯದ ಮೇಲೆ ನಿಕಟ ನಿಗಾಯಿರಿಸಬೇಕಿದೆ. ಆ ಕಂಪೆನಿಯಿಂದ ಪಿತೂರಿಯ ಸಾಧ್ಯತೆಯಿದೆ. ಇಂತಹ […]

‘ಏರ್ ಇಂಡಿಯಾ’ ವಿಮಾನ ಪತನದ ಹಿಂದೆ ಟರ್ಕಿ ಕೈವಾಡವಿದ್ಯಾ? ಯೋಗಗುರು ಬಾಬಾ ರಾಮ್ ದೇವ್ ಅನುಮಾನ ವ್ಯಕ್ತಪಡಿಸಿದ್ದೇಕೆ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ರಾಶಿಗಳ ಪ್ರಭಾವವು ಮಹತ್ವವಾದುದು. ದ್ವಾದಶ ರಾಶಿಗಳು ಈ ವಾರ ಯಾರಿಗೆ ಶುಭವನ್ನು ತರುತ್ತವೆ? ಯಾರಿಗೆ ಲಾಭ? ನೋಡೋಣ…ಬನ್ನಿ… ಮೇಷರಾಶಿ:ಸಂಕ್ರಮಣದಂದು ಸೂರ್ಯನು ಬುಧನ ಮನೆಯನ್ನು ಸೇರುತ್ತಾನೆ. ಯೋಗಕಾರಕರೂ ಆಗಿರುತ್ತಾರೆ. ಮಿಥುನ ರಾಶಿಯಲ್ಲಿ ಗುರುವಿರುವುದರಿಂದ ಮೇಷ ರಾಶಿಗೆ ಒಳ್ಳೆಯ ಫಲ ನೀಡುತ್ತಾರೆ, ಸೂರ್ಯಾಷ್ಟಕ ಪಾರಾಯಣ ಮಾಡಿ. ವಿಷ್ಣುವನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಿದಲ್ಲಿ ಲಾಭದಲ್ಲಿ ಸೂರ್ಯೋದಯವಾಗುತ್ತದೆ. ಆರೋಗ್ಯದ ಕಡೆ ಗಮನವಿರಲಿ. ದೇಹಕ್ಕೆ ಆಲಸ್ಯವಾಗಲಿ, ಅನಾರೋಗ್ಯವಾಗಲಿ ಬಂದರೂ ತೊಂದರೆ ಎಂದು ನೆನೆಪಿನಲ್ಲಿರಲಿ. ವೃಷಭ ರಾಶಿ:ವೃಷಭ ರಾಶ್ಯಾಧಿಪತಿ ಶುಕ್ರನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರಿನಲ್ಲಿ ಅಬ್ಬರಿಸಿದ ವರುಣ; ಜನಜೀವನ ಅಸ್ತವ್ಯಸ್ಥ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಮಳೆಯಿಂದ ಮಂಗಳೂರು ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪಂಪ್‌ವೆಲ್ ಫ್ಲೈಓವರ್‌ ಕೆಳಗಿನ ರಸ್ತೆಗಳು ಮುಳುಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಪ್ರವಾಹಕ್ಕೆ ಸಿಲುಕಿದ ಬಸ್ ವೊಂದು ರಸ್ತೆ ಮಧ್ಯೆಯೇ ಕೆಟ್ಟು ನಿಂತಿದ್ದು, ಪ್ರಯಾಣಿಕರು

ಮಂಗಳೂರಿನಲ್ಲಿ ಅಬ್ಬರಿಸಿದ ವರುಣ; ಜನಜೀವನ ಅಸ್ತವ್ಯಸ್ಥ Read More »

ಕೊನೆಗೂ ಕಳಕೊಂಡ ಚೋಕರ್ಸ್ ಪಟ್ಟ| ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಸ್ ಗೆ ಮುತ್ತಿಟ್ಟ ದ.ಆಫ್ರಿಕಾ

ಸಮಗ್ರ ನ್ಯೂಸ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025 ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಚೊಚ್ಚಲ ಟ್ರೋಫಿ ತನ್ನದಾಗಿಸಿಕೊಳ್ಳುವ ಹೊಸ ದಾಖಲೆಯನ್ನೇ ಸೃಷ್ಟಿಸಿದೆ ಕ್ರಿಕೆಟ್ ತವರು ಲಾರ್ಡ್ಸ್ ಕ್ರಿಕೆಟ್​ ಮೈದಾನದಲ್ಲಿ ಚಾಂಪಿಯನ್‌ಶಿಪ್ 2025ರ ಫೈನಲ್‌ ಪಂದ್ಯದಲ್ಲಿ ಆಸಿಸ್‌ ತಂಡವನ್ನು ಮಣಿಸುವ ಮೂಲಕ ದಕ್ಷಿಣ ಆಫ್ರಿಕಾ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಹೊಸ ಚರಿತ್ರೆಯನ್ನೇ ಸೃಷ್ಟಿಸಿದ್ದು, ಇದರಿಂದ ಬರೀ ದಕ್ಷಿಣ

ಕೊನೆಗೂ ಕಳಕೊಂಡ ಚೋಕರ್ಸ್ ಪಟ್ಟ| ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಸ್ ಗೆ ಮುತ್ತಿಟ್ಟ ದ.ಆಫ್ರಿಕಾ Read More »

ಹವಾಮಾನ ವರದಿ; ಕರಾವಳಿಯಲ್ಲಿ ಭಾರೀ ಮಳೆ‌ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೀದರ್‌ ಸೇರಿದಂತೆ ಹಲವೆಡೆ ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದೆ. ಬುಧವಾರ ತಡರಾತ್ರಿ ಸುರಿದ ಧಾರಕಾರ ಮಳೆಗೆ ತತ್ತರಿಸಿದ್ದ ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಕರ್ನಾಟಕದ

ಹವಾಮಾನ ವರದಿ; ಕರಾವಳಿಯಲ್ಲಿ ಭಾರೀ ಮಳೆ‌ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ Read More »

ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ

ಸಮಗ್ರ ನ್ಯೂಸ್: NITK ಹಳೆಯ ವಿದ್ಯಾರ್ಥಿ ಮತ್ತು NCC ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಎಳಿಮಲದ ಭಾರತೀಯ ನೌಕಾ ಅಕಾಡೆಮಿಯಲ್ಲಿ 10 ತಿಂಗಳ ತೀವ್ರ ಮಿಲಿಟರಿ ತರಬೇತಿ ಕಾರ್ಯಕ್ರಮದ ನಂತರ, ಮೇ 31, 2025 ರಂದು ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಅನನ್ಯ ಅವರನ್ನು ಔಪಚಾರಿಕವಾಗಿ ನೌಕಾಪಡೆಗೆ ಸೇರಿಸಲಾಯಿತು. ನಿವೃತ್ತ ಟೆಲಿಕಾಂ ಉದ್ಯೋಗಿ ಶ್ರೀ ಸತೀಶ್ ರಾವ್ ಮತ್ತು ವೀಣಾ ದಂಪತಿಗಳ ಪುತ್ರಿ ಕುಮಾರಿ ಅನನ್ಯಾ ರಾವ್ LKg ಇಂದ SSLC

ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ Read More »

ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯಸರ್ಕಾರದ ನೆಮ್ಮದಿ ಕೆಡಿಸಿದ್ದ ಇತ್ತೀಚಿನ ಸರಣಿ ಕೊಲೆಗಳು ಹಾಗೂ ಕೋಮು ಹಿಂಸಾಚಾರವನ್ನು ಹತ್ತಿಕ್ಕಲು ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ವಿಧಾನಪರಿಷತ್‌ ಸದಸ್ಯರಾದ ಮಂಜುನಾಥ್‌ ಭಂಡಾರಿ, ಐವಾನ್‌ ಡಿಸೋಜ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್‌ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್‌, ಕೊಂಕಣಿ

ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ Read More »

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಪ್ರಯಾಣಿಕರು ಇರದ ಕಾರಣ ಹೆಚ್ಚಿನ ಅಪಘಾತ ಸಂಭವಿಸಿಲ್ಲ,ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಹಾಗೂ ಸುಳ್ಯ ದಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಘಟನೆ ನಡೆದಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ Read More »

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿ ಹಾಗೂ ಪೌರ ರಕ್ಷಣಾ

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ Read More »

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »