ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ.
ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ.
ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ .
ಆದರೆ ಅಟಿ ಅಮಾವಾಸ್ಯೆಯ ದಿನ ಮದ್ದು ಕುಡಿಯುವ ಸಂಪ್ರದಾಯವಿದೆ. ಅದೇ ಪ್ರಧಾನ ಆಚರಣೆಯೂ ಆಗಿದೆ. ಅದು ಹುಳಗಳನ್ನು ಕೊಲ್ಲುವುದಕ್ಕಾಗಿ ಇರುವ ಮದ್ದು ಇಂತಹ ಆರೋಗ್ಯದ ಉದ್ದೇಶಕ್ಕಾಗಿ ಉಪಯೋಗವಾಗುವ ಮದ್ದನ್ನು ವರ್ಷಕ್ಕೊಂದೇ ದಿನ ಕುಡಿಯುವುದು ಸಂಪ್ರದಾಯ ಮತ್ತು ಆರೋಗ್ಯಕರವೂ ಹೌದು. ಮೇಲಾಗಿ ಅದು ಪಾಲೆಯ ಮರದ ಕೆತ್ತೆಯಿಂದ ತೆಗೆಯುವ ಮದ್ದು ಆ ಮರದ ಸಂಖ್ಯೆಯೂ ಕಡಿಮೆ ಇರುವ ಕಾರಣ ಎರಡೆರಡು ಭಾರಿ ಅದರ ಕೆತ್ತೆ ತೆಗೆದರೆ ಮರಕ್ಕೂ ತೊಂದರೆಯಾಗಬಹುದು. ಮದ್ದು ತುಂಬ ಉಷ್ಣವಾದ ಕಾರಣವೂ ಎರಡೆರಡು ದಿನ ಕುಡಿಯುವುದು ಸಮಂಜಸವಲ್ಲ. ಈ ಎಲ್ಲ ದೃಷ್ಟಿಯಿಂದ ಇದರ ಆಚರಣೆಯ ದಿನ ಒಂದೇ ಆದರೆ ಸೂಕ್ತ. ಆದ್ದರಿಂದ ಯಾವ ದಿನ ಒಳ್ಳೆಯದು ಎಂದು ಯೋಚಿಸಬೇಕು.






