July 2025

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ. […]

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ Read More »

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್

ಸಮಗ್ರ ನ್ಯೂಸ್‌: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ನ್ಸ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್ Read More »

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸ್ವಾಭಾವಿಕ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್ Read More »

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ?

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ?

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ? Read More »

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಇಂದೋರ್ ನಗರವು 2024-25ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಸತತ 8ನೇ ಬಾರಿಗೆ ದೇಶದ ‘ಅತ್ಯಂತ ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರವು ವಾರ್ಷಿಕವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್‌ ಪ್ರಥಮ, ಗುಜರಾತ್​​ನ ಸೂರತ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದ ಮುಂಬೈ ಮೂರನೇ ಸ್ಥಾನ ಪಡೆದುಕೊಂಡಿದೆ. 3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ, ನೋಯ್ಡಾ ಸ್ವಚ್ಛ ನಗರವಾಗಿ ಅಗ್ರಸ್ಥಾನ ಪಡೆದಿದ್ದು, ಚಂಡೀಗಢ ಎರಡನೇ ಸ್ಥಾನದಲ್ಲಿದೆ ಮತ್ತು

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ Read More »

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು Read More »

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟ ಭಾಗದ ಅರೆಬೈಲ್ ಜಲಪಾತದಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಜಲಪಾತ ವೀಕ್ಷಿಸಲು ಆಗಮಿಸಿದ್ದ ಪ್ರವಾಸಿಗರು ನಡುವೆ ಸಿಲುಕಿದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಖಾಸಗಿ ಮೆಡಿಕಲ್‌ ಕಾಲೇಜಿನ ಐವರು ವಿದ್ಯಾರ್ಥಿಗಳು ಅರೆಬೈಲ್ ಘಟ್ಟದ ಕಾಡಿನ ಮಧ್ಯದಲ್ಲಿ ಇರುವ ಅರೆಬೈಲ್ ಜಲಪಾತಕ್ಕೆ ಆಗಮಿಸಿದ್ದರು. ಜಲಪಾತ ವೀಕ್ಷಣೆ ವೇಳೆ ಅವರು ಚಿಕ್ಕ ಹಳ್ಳವನ್ನು ದಾಟಲು ಮುಂದಾಗಿದ್ದರು. ಆಗ ಏಕಾಏಕಿ ನೀರಿನ ಹರಿವು ಹೆಚ್ಚಳವಾಗಿದೆ. ಜಲಪಾತದಲ್ಲಿ ನೀರು ಧುಮ್ಮಿಕ್ಕಲು ಪ್ರಾರಂಭಿಸಿದಂತೆ

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ Read More »

ಕಾರ್ಕಳ ಶಾಸಕ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು

ಕಾರ್ಕಳ ಶಾಸಕ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಗೆ ಪಿತೃವಿಯೋಗ Read More »

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ

ಸಮಗ್ರ ನ್ಯೂಸ್: 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಕರ್ನಾಟಕ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ Read More »

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ| ಮಂಗಳೂರು – ಬೆಂಗಳೂರು ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17, 2025ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಬೃಹತ್ ಪ್ರಮಾಣದ ಮಣ್ಣು ಕುಸಿದು ರಸ್ತೆಯ ಮೇಲೆ ಬಿದ್ದಿರುವುದರಿಂದ ವಾಹನ ಸಂಚಾರ ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಸ್ತುತ, ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯ ಆರಂಭಿಸಿದ್ದಾರೆ. ಮಣ್ಣು

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ| ಮಂಗಳೂರು – ಬೆಂಗಳೂರು ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ Read More »