ಸಮಗ್ರ ನ್ಯೂಸ್: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ.
‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ ಎದುರಾಗಿದ್ದು, ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.
ಮಾಜಿ ಸಂಸದ ‘ ಪ್ರಜ್ವಲ್ ರೇವಣ್ಣ’ ವಿರುದ್ಧದ ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ಆಗಸ್ಟ್ 1 ಕ್ಕೆ ತೀರ್ಪು ಮುಂದೂಡಿಕೆಯಾಗಿತ್ತು. ಇಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಕೆಆರ್ ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.






