ಜನಾಕ್ರೋಶಕ್ಕೆ ಬೆದರಿದ ಇಲಾಖೆ|ಎನ್ ಆರ್ ಪುರದಲ್ಲಿ ಕಾಡಾನೆ ಕಾರ್ಯಾಚರಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಮಲೆನಾಡಿಗರ ಆಕ್ರೋಶಕ್ಕೆ ಅರಣ್ಯ ಇಲಾಖೆ ಮತ್ತೊಮ್ಮೆ ಬೆದರಿದ್ದು ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ.

Ad Widget ... ..

ಕಾಡಾನೆಯು 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಸಹ ಒಡೆದಿತ್ತು. ಬಾಳೆಹೊನ್ನೂರು – ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು.

Ad Widget

ಗಂಟೆಗಟ್ಟಲೇ ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಜನರ ಆಕ್ರೋಶಕ್ಕೆ ಬೆದರಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ 2 ಆನೆಯನ್ನು ಸೆರೆ ಹಿಡಿಯುತ್ತೇವೆ ಎಂದಿದ್ದರು. ಆದರೆ, ಕುಮ್ಕಿ ಆನೆಗಳು ಒಂದು ಪುಂಡಾನೆಯನ್ನು ಸೆರೆ ಹಿಡಿಯುತ್ತಿದ್ದಂತೆ ಕುಮ್ಕಿ ಆನೆಗಳು ಲಾರಿ ಹತ್ತಿದ್ದವು.

ಆದರೆ, ಒಂದು ಆನೆ ಸೆರೆ ಹಿಡಿದು ಕುಮ್ಕಿ ಆನೆಗಳು ವಾಪಸ್ ಹೋಗಿದ್ದಕ್ಕೆ ಜನ ಮತ್ತೊಮ್ಮೆ ಹೋರಾಟದ ಬಗ್ಗೆ ಚಿಂತಿಸ ತೊಡಗಿದ್ದರು. ಇದರ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆ ಸೆರೆಗೆ ಮತ್ತೆ ಅನುಮತಿ ನೀಡಿರುವುದರಿಂದ ಬಿಡಾರಕ್ಕೆ ವಾಪಸ್ ಹೋಗಿದ್ದ ಕುಮ್ಕಿ ಆನೆಗಳು ಮತ್ತೆ ವಾಪಸ್ ಬಂದಿವೆ.

ನಿನ್ನೆಯಿಂದ (ಆ.4) ಎನ್.ಆರ್.ಪುರದ ಮುತ್ತಿನಕೊಪ್ಪ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಒಮ್ಮೆ ಕುಮ್ಕಿ ಆನೆಗಳನ್ನ ತಂದು-ತಗೆದುಕೊಂಡು ಹೋಗಲು ಲಕ್ಷಾಂತರ ಖರ್ಚು ಬರುತ್ತೆ. ಅಧಿಕಾರಿಗಳು-ಸರ್ಕಾರ 3-4 ದಿನಕ್ಕೆ ಆನೆಗಳನ್ನ ಸಾಗಾಟ ಮಾಡ್ತಿರೋದು ಸರ್ಕಾರದ ಬೊಕ್ಕಸಕ್ಕೆ ನಷ್ಟವಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

Leave a Comment

Your email address will not be published. Required fields are marked *