ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್, ಗುಟ್ಕಾ, ಸಿಗರೇಟ್ ಮಾರಾಟ ಸಂಪೂರ್ಣ ನಿಷೇಧ

ಸಮಗ್ರ ನ್ಯೂಸ್: ಪ್ಲಾಸ್ಟಿಕ್ ನಿಷೇಧದ ಕುರಿತು ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯ ಅಂಗಡಿ ಕಟ್ಟಡಗಳ ಬಾಡಿಗೆದಾರರು, ವ್ಯಾಪಾರಸ್ಥರಿಗೆ ಮಾಹಿತಿ ನೀಡುವ ಸಭೆ ನಡೆಯಿತು. ಬೀಡಿ, ಸಿಗರೇಟ್, ಗುಟ್ಕಾ ಮಾರಾಟವನ್ನು ನಿಷೇಧಿಸಿರುವ ಬಗ್ಗೆ ತಿಳಿಸಲಾಯಿತು.

Ad Widget ... ..

ಎಲ್ಲ ಅಂಗಡಿಗಳಿಗೆ ಪರಿಶೀಲನಾ ತಂಡ ಭೇಟಿ ನೀಡಿ, ಪ್ಲಾಸ್ಟಿಕ್ ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಇರುವ ಪ್ಲಾಸ್ಟಿಕ್ ಮುಗಿಯುವವರೆಗೆ ಮಾರಾಟಕ್ಕೆ ಅಭ್ಯಂತರವಿಲ್ಲ. ಆದರೆ ಇಲ್ಲಿ ಶಾಶ್ವತವಾಗಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಇಒ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದರು.

Ad Widget

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಜಿತ್ ಕುಮಾರ್, ಸೌಮ್ಯ ಭರತ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ., ಲೋಲಾಕ್ಷ ಕೈಕಂಬ, ಪ್ರಮುಖರಾದ ಸುಧೀರ್ ಶೆಟ್ಟಿ, ಶಿವರಾಮ ರೈ, ಮಹೇಶ್, ಮೋನಪ್ಪ ಡಿ., ಉದಯ ಕುಮಾರ್, ಯೋಗೀಶ್, ಮಾಧವ ದೇವರಗದ್ದೆ, ರವಿ ಕಕ್ಕೆಪದವು, ಗಣೇಶ್ ಪ್ರಸಾದ್, ಯಜ್ಞೇಶ್ ಆಚಾರ್, ಸುದರ್ಶನ ಜೋಯಿಸ, ಗೋಪಾಲ್ ಎಣ್ಣೆ ಮಜಲು, ರವೀಂದ್ರ ಸುಬ್ರಹ್ಮಣ್ಯ, ದೀಪಕ್ ನಂಬಿಯಾರ್, ರತ್ನಾವತಿ ನೂಚಿಲ, ನಿತಿಶ್, ಸಂತೋಪ್, ದಿನೇಶ್ ಭಾಗವಹಿಸಿದ್ದರು.

Leave a Comment

Your email address will not be published. Required fields are marked *