ಧರ್ಮಸ್ಥಳ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಉದಯ ಜೈನ್

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡದ (ಎಸ್‌ಐಟಿ) ಬೆಳ್ತಂಗಡಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಬುಧವಾರ ಹಾಜರಾದರು.

Ad Widget ... ..

ಸುದ್ದಿಗಾರರ ಜೊತೆ ಮಾತನಾಡಿದ ಉದಯ್ ಜೈನ್, ‘ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಹೇಳಿದರು.

Ad Widget

ಸೌಜನ್ಯ ಕೊಲೆ ಪ್ರಕರಣದ ಎಫ್‌ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು. ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ ಎಂದರು.

Leave a Comment

Your email address will not be published. Required fields are marked *