ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ| ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರಿಂದ ನೊಟೀಸ್

ಸಮಗ್ರ ನ್ಯೂಸ್: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ 2 ತಲವಾರ್ ಮತ್ತು 1 ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿ ಸೆಪ್ಟೆಂಬರ್ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 19 ರಂದು ಬೆಳಗ್ಗೆ 6 ಗಂಟೆಗೆ ಉಜಿರೆ ತಿಮರೋಡಿ ನಿವಾಸಕ್ಕೆ ಬಂಧಿಸಲು ತೆರಳಿದಾಗ ಮನೆಯಿಂದ ಮೊದಲೇ ಮಹೇಶ್ ಶೆಟ್ಟಿ ತಿಮರೋಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Ad Widget ... ..

ಬುರುಡೆ ಪ್ರಕರಣದ ವಿಚಾರವಾಗಿ ಬೆಳ್ತಂಗಡಿ ಎಸ್‌ಐಟಿ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಆಗಸ್ಟ್ 26ರಂದು ಶೋಧ ನಡೆಸಿದ್ದರು. ಈ ವೇಳೆ ಅಲ್ಲಿ ಎರಡು ತಲವಾರು, ಒಂದು ಬಂದೂಕು ಸಿಕ್ಕಿತ್ತು. ಅದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

Ad Widget

ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 18ರಂದು ಉಜಿರೆ ತಿಮರೋಡಿಯವರ ಮನೆಗೆ ಮಹಜರು ನಡೆಸಲು ಹೋಗಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ. ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೆಪ್ಟೆಂಬರ್ 19ರಂದು ಬೆಳಗ್ಗೆ 6ಕ್ಕೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಯಲ್ಲಿ ಯಾರೂ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಸೆಪ್ಟೆಂಬರ್ 21ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅನ್ನು ಬೆಳ್ತಂಗಡಿ ಪೊಲೀಸರು ಅಂಟಿಸಿ ತೆರಳಿದ್ದಾರೆ.

Leave a Comment

Your email address will not be published. Required fields are marked *