ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Ad Widget ... ..

ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

Ad Widget

ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಅಕ್ಟೋಬರ್ 1 ರಿಂದ 3 ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೂರು ದಿನ ಮತ್ತೆ ಮಳೆ ಸಕ್ರಿಯವಾಗುವ ಲಕ್ಷಣಗಳು ಇವೆ. ಈ ಮೂರು ದಿನ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಮೂಲಕ ಮುಂದಿನ ವಾರಪೂರ್ತಿ ಮಳೆರಾಯನ ಆರ್ಭಟ ಕಂಡು ಬರುವುದು ಬಹುತೇಕ ಖಚಿತವಾಗಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

Leave a Comment

Your email address will not be published. Required fields are marked *