September 2025

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾನ್ ಮಾಡಿದ ನೇಪಾಳ ಸರಕಾರದ ವಿರುದ್ದ ಯುವ ಜನತೆ ಪ್ರಾರಂಭಿಸಿದ ಹೋರಾಟ ಇದೀಗ ಇಡೀ ನೇಪಾಳವನ್ನೆ ಅಕ್ಷರಶಃ ಅಶಾಂತಿಗೆ ದೂಡಿದೆ. ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ತೀವ್ರ ಸ್ವರೂಪದ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಅಲ್ಲಿನ ಪ್ರಧಾನಿ ಕೆ.ಪಿ. ಓಲಿಯವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳು ಕೇವಲ ಸಾಮಾಜಿಕ ಜಾಲತಾಣಗಳ ನಿಷೇಧದಿಂದ ಮಾತ್ರ ಭುಗಿಲೆದ್ದಿದ್ದಲ್ಲ. ಅಲ್ಲಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ಸ್ವಜನಪಕ್ಷಪಾತಿ ಧೋರಣೆ, ಅಗಾಧವಾಗಿ ಬೆಳೆದಿರುವ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸದೇ […]

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್ 13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆದಿತ್ತು.ಈ ವೇಳೆ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ವಿಚಾರಣೆ ಬಳಿಕ ಶಾಸಕನನ್ನು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಆ.13 ಮತ್ತು

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ Read More »

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು

ಸಮಗ್ರ ನ್ಯೂಸ್: ಕರ್ನಾಟಕದ ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಕೋಮುಜ್ವಾಲೆಯ ಕಿಡಿ ಹಚ್ಚಿದ್ದರೆ ಅತ್ತ ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದು ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಾಸರಗೋಡಿನ ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವ ಸಲ್ಲಿಸಲಾಗಿದೆ. ಅನಿಶಿತ್ ಎಂಬವರು ಗೌರವ ಸಲ್ಲಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದು

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು Read More »

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ

ಸಮಗ್ರ ನ್ಯೂಸ್: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ. ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ ಅಪೂರ್ವ ಸಾಮರ್ಥ್ಯವನ್ನು ಹೊಂದಿರುವ ಅಪ್ರಮೇಯ ಪಿ.ಎನ್. ಎಂಬ ಬಾಲಕ ತನ್ನ ಈ ಜ್ಞಾನದ ಕಾರಣಕ್ಕಾಗಿ ದಾಖಲೆ ನಿರ್ಮಿಸಿದ್ದಾನೆ. ಭಗವದ್ಗೀತೆಯ ಮೊದಲ ಅಧ್ಯಾಯದ ಕೆಲವು ಶ್ಲೋಕಗಳು, ಶ್ರೀರಾಮನ ವಂಶವೃಕ್ಷ, 6೦ ಸಂವತ್ಸರಗಳು, ಮಾಸಗಳು, ನಕ್ಷತ್ರಗಳು, ಪ್ರಾಣಿಗಳು, ಪಕ್ಷಿಗಳು, ಬಣ್ಣಗಳು, ದೇಹದ

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ Read More »

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಸಮಗ್ರ ನ್ಯೂಸ್: ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ)

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ Read More »

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು

ಸಮಗ್ರ ನ್ಯೂಸ್: ಗುಂಡಿಮಯ ರಸ್ತೆಯಲ್ಲಿ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೂಳೂರು ರಾಯಲ್ ಓಕೆ ಶೋರೂಂ ಮುಂಭಾಗ ಈ ಅಪಘಾತ ಸಂಭವಿಸಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಉಡುಪಿಯ ಪರ್ಕಳ ಮೂಲದವರು. ಮಂಗಳೂರಿನ ಎ.ಜೆ. ಆಸ್ಪತ್ರೆ ಸಿಬ್ಬಂದಿಯಾಗಿರುವ ಮಾಧವಿ ಎಂದಿನಿಂದತೆ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆಗುಂಡಿಯಲ್ಲಿ ಬೈಕ್ ಬಿದ್ದಿದೆ. ಆಯತಪ್ಪಿ ಕೆಳಗೆ ಬಿದ್ದ ಮಾಧವಿ ಮೇಲೆಯೇ

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು Read More »

ಐತಿಹಾಸಿಕ ದಾಖಲೆ ಬರೆದ ಚಿನ್ನ| ಚಿನ್ನದ ದರ ನೋಡಿ ಗ್ರಾಹಕರಿಗೆ ಶಾಕ್

ಸಮಗ್ರ: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1,10,047 ರೂ.ಗಡಿ ದಾಟಿದೆ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ, ಚಿನ್ನವು ಮೊದಲ ಬಾರಿಗೆ 10 ಗ್ರಾಂಗೆ 458 ರೂ.ಗಳಷ್ಟು ಏರಿಕೆಯಾಗಿ 1,10,047 ರೂ.ಗಳಷ್ಟು ಐತಿಹಾಸಿಕ ಮಟ್ಟವನ್ನು ತಲುಪಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಏರಿಕೆ ಮತ್ತು ಯುಎಸ್ ಡಾಲರ್ನ ದುರ್ಬಲತೆಯಿಂದಾಗಿ ಈ ಏರಿಕೆ ಕಂಡುಬಂದಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ ಡಿಸೆಂಬರ್ ವಿತರಣೆಗಾಗಿ ಚಿನ್ನದ ಭವಿಷ್ಯದ ಬೆಲೆ 458 ರೂ.ಗಳಷ್ಟು ಅಥವಾ 0.41% ರಷ್ಟು ಏರಿಕೆಯಾಗಿ 10 ಗ್ರಾಂಗೆ 1,10,047 ರೂ.ಗಳಿಗೆ ತಲುಪಿದೆ.

ಐತಿಹಾಸಿಕ ದಾಖಲೆ ಬರೆದ ಚಿನ್ನ| ಚಿನ್ನದ ದರ ನೋಡಿ ಗ್ರಾಹಕರಿಗೆ ಶಾಕ್ Read More »

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ| ಗಣರಾಜ್ ಕೆದಿಲ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಪೆರ್ನೆಯಲ್ಲಿ ದನ ಕದ್ದು ಮಾಂಸ ಮಾಡಿದ ಘಟನೆ ವಿರೋಧಿಸಿ ಸೆಪ್ಟೆಂಬರ್ 6 ರಂದು ನಡೆದಿದ್ದ ಪ್ರತಿಭಚನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಗಣರಾಜ್ ಭಟ್ ಕೆದಿಲ ಅವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ʼʼಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ” ಇದರ ವತಿಯಿಂದ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ| ಗಣರಾಜ್ ಕೆದಿಲ ವಿರುದ್ಧ ಎಫ್ಐಆರ್ Read More »

ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದು ಮಾವ ವಿಠಲ ಗೌಡ| ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಸಮಗ್ರ‌‌ ನ್ಯೂಸ್: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ನಡೆದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸೌಜನ್ಯಳ ಮಾವ ವಿಠಲ ಗೌಡ ಅವರೇ ಈ ಕೊಲೆಯನ್ನು ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ಸ್ನೇಹಮಯಿ ಕೃಷ್ಣ, ಈ ಪ್ರಕರಣದ ಬಗ್ಗೆ ತಾವು ಸಂಗ್ರಹಿಸಿದ ಸಾಕ್ಷ್ಯಗಳನ್ನು ಆಧರಿಸಿ ವಿಠಲ ಗೌಡ ಅವರ ವಿರುದ್ಧ ದೂರು

ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದು ಮಾವ ವಿಠಲ ಗೌಡ| ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ Read More »

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ| ಉದ್ವಿಗ್ನಗೊಂಡ ಮಂಡ್ಯ ಜಿಲ್ಲೆಯ ಮದ್ದೂರು| ನಾಳೆ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ನಾಳೆ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 21 ಮಂದಿಯನ್ನ ಬಂಧಿಸಲಾಗಿದೆ. ಮದ್ದೂರಿನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸಿಎಂ ಸೂಚನೆ ಮೇರೆಗೆ ಮದ್ದೂರಿಗೆ ಹೋಗುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ| ಉದ್ವಿಗ್ನಗೊಂಡ ಮಂಡ್ಯ ಜಿಲ್ಲೆಯ ಮದ್ದೂರು| ನಾಳೆ ಬಂದ್ ಗೆ ಕರೆ Read More »