September 2025

ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, […]

ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ| ಸರಸ್ವತಿ ಪುತ್ರ ಇನ್ನು ನೆನಪು ಮಾತ್ರ

ಸಮಗ್ರ ನ್ಯೂಸ್: ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು

ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ| ಸರಸ್ವತಿ ಪುತ್ರ ಇನ್ನು ನೆನಪು ಮಾತ್ರ Read More »

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್

ಸಮಗ್ರ ನ್ಯೂಸ್: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್ Read More »

8 ರಾಜ್ಯಗಳಿಗೆ ಕಾಲಿಟ್ಟ ‘ಐ‌ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್

ಸಮಗ್ರ ನ್ಯೂಸ್: ಉತ್ತರಪ್ರದೇಶದಲ್ಲಿ ಇಸ್ಲಾಮಿಕ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಹುಟ್ಟಿಕೊಂಡ ಐ ಲವ್‌ ಮೊಹಮ್ಮದ್‌ ಪೋಸ್ಟರ್‌ ವಿವಾದ ಮತ್ತು ಅದಕ್ಕೆ ಪ್ರತಿಯಾಗಿ ಐ ಲವ್‌ ಮಹಾದೇವ್‌ ಪೋಸ್ಟರ್‌ ವಾರ್‌ ಇದೀಗ ದೇಶದ 8 ರಾಜ್ಯಕ್ಕೆ ಹಬ್ಬಿದೆ. ಹಲವು ರಾಜ್ಯಗಳಲ್ಲಿ ಈ ವಿಷಯ ಹಿಂದೂ- ಮುಸ್ಲಿಂ ಗಲಭೆಗೆ ಕಾರಣವಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಸೆ.4ರಂದು ನಡೆದ ಈದ್‌ ಇ ಮಿಲಾದ್‌ ಉನ್‌ ನಬಿ ಮೆರವಣಿಗೆಯಲ್ಲಿ ಕೆಲ ಯುವಕರು ‘ ಐ ಲವ್‌ ಮಹಮ್ಮದ್‌’ ಎಂದು ಬರೆದಿದ್ದ ಪೋಸ್ಟರ್‌ಗಳನ್ನು ಟ್ರಾಫಿಕ್‌ ಜಂಕ್ಷನ್‌ಗಳು,

8 ರಾಜ್ಯಗಳಿಗೆ ಕಾಲಿಟ್ಟ ‘ಐ‌ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್ Read More »

ಬೆಂಗಳೂರಿನಲ್ಲಿ ನ್ಯಾಯ ಸಮಾವೇಶ| ಧರ್ಮಸ್ಥಳ ಸುತ್ತಮುತ್ತ 20 ವರ್ಷಗಳಲ್ಲಿ ನಡೆದ ಎಲ್ಲಾ ಪ್ರಕರಣಗಳ ತನಿಖೆಗೆ ಒತ್ತಾಯ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತ 20 ವರ್ಷಗಳಲ್ಲಿ ನಡೆದಿರುವ ಅತ್ಯಾಚಾರ, ಅಸಹಜ ಸಾವು, ಕೊಲೆ ಪ್ರಕರಣಗಳನ್ನು ಎಸ್‌ಐಟಿ ರಚನೆಯ ಸಂಬಂಧ ಹೊರಡಿಸಲಾದ ಆದೇಶದಲ್ಲಿ ಇರುವಂತೆಯೇ ಪೂರ್ಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನ್ಯಾಯ ಸಮಾವೇಶ’ ನಡೆಯಿತು. ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಕೊಲೆ ಪ್ರಕರಣಗಳು, ಭೂಕಬಳಿಕೆ, ಮೈಕ್ರೊ ಫೈನಾನ್ಸ್ ದೌರ್ಜನ್ಯಗಳು, ದಲಿತರ ಮೀಸಲು ಭೂಮಿ ಕಬಳಿಕೆ, ಆರ್ಥಿಕ ಅಪರಾಧದ ಆರೋಪ ಪ್ರಕರಣಗಳನ್ನು ಈಗ

ಬೆಂಗಳೂರಿನಲ್ಲಿ ನ್ಯಾಯ ಸಮಾವೇಶ| ಧರ್ಮಸ್ಥಳ ಸುತ್ತಮುತ್ತ 20 ವರ್ಷಗಳಲ್ಲಿ ನಡೆದ ಎಲ್ಲಾ ಪ್ರಕರಣಗಳ ತನಿಖೆಗೆ ಒತ್ತಾಯ Read More »

ಭಾರತಕ್ಕೆ ಮತ್ತೊಂದು ಶಾಕ್ ನೀಡಿದ ಅಮೇರಿಕ| ಔಷಧಿಗಳ ಮೇಲೆ ಶೇ.100 ಸುಂಕ ಘೋಷಣೆ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಕ್ಟೋಬರ್ 1 ರಿಂದ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಆಮದಿನ ಮೇಲೆ 100% ವರೆಗಿನ ಸುಂಕವನ್ನು ಘೋಷಿಸಿದ್ದಾರೆ. ಇದು ಭಾರತಕ್ಕೆ ಮತ್ತೊಂದು ದೊಡ್ಡ ಶಾಕ್‌ ಉಂಟುಮಾಡಿದೆ. ಒಂದು ಕಂಪನಿಯು ಅಮೆರಿಕದಲ್ಲಿ ತನ್ನ ಔಷಧೀಯ ಉತ್ಪಾದನಾ ಘಟಕವನ್ನು ನಿರ್ಮಿಸದೇ ಹೋದರೆ ಅಕ್ಟೋಬರ್ 1 ರಿಂದ ಯಾವುದೇ ಬ್ರಾಂಡ್ ಅಥವಾ ಪೇಟೆಂಟ್ ಪಡೆದ ಔಷಧೀಯ ಉತ್ಪನ್ನದ ಮೇಲೆ ನಾವು 100% ಸುಂಕವನ್ನು ವಿಧಿಸುತ್ತೇವೆ ಎಂದು ಟ್ರಂಪ್‌ ಟ್ರೂತ್ ಸೋಷಿಯಲ್‌ನಲ್ಲಿ

ಭಾರತಕ್ಕೆ ಮತ್ತೊಂದು ಶಾಕ್ ನೀಡಿದ ಅಮೇರಿಕ| ಔಷಧಿಗಳ ಮೇಲೆ ಶೇ.100 ಸುಂಕ ಘೋಷಣೆ Read More »

‘ಭಾರತ ಹಲವು ಭಾಷೆಗಳ ರಂಗೋಲಿ’ – ಬಿಳಿಮಲೆ

ಸಮಗ್ರ ನ್ಯೂಸ್: ‘ಹಲವು ಭಾಷೆಗಳ ಸಂಗಮವಾಗಿರುವ ಭಾರತವು ಭಾಷೆಗಳ ರಂಗೋಲಿ. ಆದರೆ, ದೇಶದಲ್ಲಿ ಕೆಲವು ಭಾಷೆಗಳು ನಶಿಸಿ ಹೋಗುತ್ತಿವೆ. ಅದಕ್ಕೆ ನಾವು ಸಾಕ್ಷಿಯಾಗುತ್ತಿವೆ. ಬಹುಭಾಷಾ ಕವಿಗೋಷ್ಠಿಗಳು ಭಾಷೆ ಉಳಿವಿಗೆ ಸಹಕಾರಿಯಾಗಲಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು. ಮಂಗಳೂರು ದಸರಾ ಪ್ರಯುಕ್ತ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಕಾರದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳವಾರ ನಡೆದ ಬಹುಭಾಷಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೋಜ್ ಕುಮಾರ್ ಶಿಬಾರ್ಲ (ಕನ್ನಡ), ಗೀತಾ ಲಕ್ಷ್ಮೀಶ ಶೆಟ್ಟಿ

‘ಭಾರತ ಹಲವು ಭಾಷೆಗಳ ರಂಗೋಲಿ’ – ಬಿಳಿಮಲೆ Read More »

ನಿಮ್ಮ ಜನರ ಮೇಲೆ ಬಾಂಬ್ ಹಾಕಿ ಮುಗಿದಿದ್ದರೆ ಸ್ವಲ್ಪ ಆರ್ಥಿಕತೆಯತ್ತ ಗಮನಹರಿಸಿ| ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಬೆವರಿಳಿಸಿದ ಭಾರತ

ಸಮಗ್ರ ನ್ಯೂಸ್: ಖೈಬರ್ ಪಖ್ತುಂಖ್ವಾದಲ್ಲಿ ತನ್ನದೇ ಜನರ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದ್ದಕ್ಕಾಗಿ, ಭಾರತವು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 60ನೇ ಅಧಿವೇಶನದಲ್ಲಿ ಮಾತನಾಡಿದ ಭಾರತೀಯ ರಾಜತಾಂತ್ರಿಕ ಕ್ಷಿತಿಜ್ ತ್ಯಾಗಿ, “ಇಸ್ಲಾಮಾಬಾದ್‌ ತನ್ನ ಜನರನ್ನು ಕೊಲ್ಲುವುದನ್ನು ನಿಲ್ಲಿಸಿ ದೇಶದ ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನ ಆರಂಭಿಸಬೇಕು” ಎಂದು ಕುಹುಕವಾಡಿದ್ದಾರೆ. “ಪಾಕಿಸ್ತಾನವು ಭಾರತದ ನೆಲದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ. ಇಂತಹ ಸುಳ್ಳು ಆರೋಪಗಳನ್ನು

ನಿಮ್ಮ ಜನರ ಮೇಲೆ ಬಾಂಬ್ ಹಾಕಿ ಮುಗಿದಿದ್ದರೆ ಸ್ವಲ್ಪ ಆರ್ಥಿಕತೆಯತ್ತ ಗಮನಹರಿಸಿ| ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಬೆವರಿಳಿಸಿದ ಭಾರತ Read More »

ಲಡಾಕ್ ಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವಂತೆ ಝೆನ್ ಝಿ ಪ್ರತಿಭಟನೆ| ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಸಾವು

ಸಮಗ್ರ ನ್ಯೂಸ್: ಲಡಾಖ್‌ಗೆ ರಾಜ್ಯದ ಸ್ಥಾನಮಾನ ಹಾಗೂ ಆರನೇ ಪರಿಚ್ಛೇದದಡಿ ಸೇರಿಸುವಂತೆ ಒತ್ತಾಯಿಸಿ ಲೇಹ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್ ನಡೆಸುತ್ತಿದ್ದ ಸತ್ಯಾಗ್ರಹ, ಪ್ರತಿಭಟನೆ ಮತ್ತು ಬಂದ್ ಬುಧವಾರ ಹಿಂಸಾಚಾರಕ್ಕೆ ತಿರುಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿಂಸಾಚಾರದ ವೇಳೆ ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರೆ, ಹಲವು ವಾಹನಗಳನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ರಾಜ್ಯದ ಬೇಡಿಕೆಗೆ ಸಂಬಂಧಿಸಿದಂತೆ ಅ.6ರಂದು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರದ ಮಾತುಕತೆ ನಡೆಸಲು ಮುಂದಾಗಿರುವಂತೆಯೇ ಈ ಅಹಿತಕರ

ಲಡಾಕ್ ಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವಂತೆ ಝೆನ್ ಝಿ ಪ್ರತಿಭಟನೆ| ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಸಾವು Read More »

ಇಂಡಿಯಾ – ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ| ಶುಭ್ಮನ್ ಗಿಲ್ ಗೆ ನಾಯಕತ್ವ ಪಟ್ಟ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ. ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ

ಇಂಡಿಯಾ – ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ| ಶುಭ್ಮನ್ ಗಿಲ್ ಗೆ ನಾಯಕತ್ವ ಪಟ್ಟ Read More »