ಬೆಳ್ತಂಗಡಿ: ಬಸ್ ನಲ್ಲಿ ನಿರ್ವಾಹಕಿ ಮತ್ತು ಪ್ರಯಾಣಿಕನ ನಡುವೆ ಗಲಾಟೆ

ಸಮಗ್ರ ನ್ಯೂಸ್: ಕೆಎಸ್‌ಆರ್ ಟಿಸಿ ಬಸ್ ನ ಲೇಡಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ಅಕ್ಟೋಬರ್ 10ರಂದು ನಡೆದಿದೆ.

. Ad Widget . Ad Widget . Ad Widget .

ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ ಹತ್ತಿದ ಪ್ರಯಾಣಿಕ ಟಿಕೆಟ್ ಹಣ ಕೊಟ್ಟಿದ್ದೇನೆ ಅಂತ ವಾದಿಸುತ್ತಿದ್ದರೆ, ಲೇಡಿ ಕಂಡಕ್ಟರ್ ಹಣ ಕೊಟ್ಟಿಲ್ಲ ಅಂತ ವಾದಿಸುತ್ತಿದ್ದರು.‌ ಬಸ್ ನಲ್ಲಿದ್ದ ಪ್ರಯಾಣಿಕರು ಆತ ಹಣ ಕೊಟ್ಟಿದ್ದಾನೆ ಅಂತ ಸ್ಥಳದಲ್ಲಿ ತಿಳಿಸಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬಸ್ ನಲ್ಲಿದ್ದ ಪ್ರಯಾಣಿಕರು ಕಂಗಾಲಾದರು. ಈ ವೇಳೆ ಬೆಳ್ತಂಗಡಿ ಪೊಲೀಸರು ಮದ್ಯ ಪ್ರವೇಶಿಸಿ, ಕಂಡಕ್ಟರ್ ಮತ್ತು ಪ್ರಯಾಣಿಕನನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಬೆಳ್ತಂಗಡಿ ಟಿಸಿ ಬದಲಿ ವ್ಯವಸ್ಥೆ ಮಾಡಿದರು. ಬೆಳ್ತಂಗಡಿಯಲ್ಲೇ ನಿಂತ ಬಸ್ ಗೆ ಬದಲಿ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

Leave a Comment

Your email address will not be published. Required fields are marked *