ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ

ಸಮಗ್ರ ನ್ಯೂಸ್: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.

Ad Widget ... ..

ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು. ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ.

Ad Widget

ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆಯ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಲಕುಮೇರಿನ ಮಹೇಶ್ ಎಂದು ಗುರುತಿಸಲಾಗಿದ್ದು, ತನ್ನ ಮನೆಯನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಈ ಆರೋಪಿಗಳು ಗಾಂಜಾ ವ್ಯವಹಾರದಲ್ಲೂ ತೊಡಗಿಸಿದ್ದ ಆರೋಪ ಇದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *