ರಾಜ್ಯದ ಎಲ್ಲಾ ಮುಜುರಾಯಿ ದೇವಾಲಯಗಳಲ್ಲಿ ನಾಳೆ(ಅ.22) ಗೋಪೂಜೆ ಕಡ್ಡಾಯಗೊಳಿಸಿ‌ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ನಾಳೆಯಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ.

. Ad Widget . Ad Widget . Ad Widget .

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಅವರ ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.

Leave a Comment

Your email address will not be published. Required fields are marked *