ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ (ಅ.31) ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

Ad Widget

ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Leave a Comment

Your email address will not be published. Required fields are marked *