October 2025

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿ ಮಾಡದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ.ಉದಯ್‌ ಕುಮಾರ್‌ ಮತ್ತಿತರರು […]

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!!

ಸಮಗ್ರ ನ್ಯೂಸ್: ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ. ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!! Read More »

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು 

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲ(Hippla) ಎಂಬ ಹೆಸರಿನ  ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಅ.25 ರಂದು ಮುಂಜಾನೆ ಸಂಭವಿಸಿದೆ. ಬೇಲೂರು ತಾಲೂಕು ದೇವಲಾಪುರ ಮೂಲದ ದೇವರಾಜುಗೌಡ ಎಂಬುವವರ ಪುತ್ರಿ ರಂಜಿತಾ(27 ವರ್ಷ) ಮೃತಪಟ್ಟ ಯುವತಿ. ಇವರ ಸಹೋದರ ಶರತ್ ಮೂಡಿಗೆರೆ ಪಟ್ಟಣದ ಗೆಂಡೇಹಳ್ಳಿ ರಸ್ತೆಯ ರವಿ ಕ್ಯಾಂಟೀನ್ ಪಕ್ಕ  ಬೇಕರಿ ನಡೆಸುತ್ತಿದ್ದು, ಇವರ ಕುಟುಂಬ ಮೂಡಿಗೆರೆ ಪಟ್ಟಣದಲ್ಲಿಯೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತನ್ನ ಗೆಳತಿ

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು  Read More »

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ

ಸಮಗ್ರ ನ್ಯೂಸ್: ಭಾರತದ ನಂತರ ಇದೀಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ‘ಜಲಬಾಂಬ್’ ಹಾಕಲಾಗಿದೆ. ಅಣೆಕಟ್ಟು ನಿರ್ಮಿಸಲು ಮತ್ತು ಪಾಕಿಸ್ತಾನಕ್ಕೆ ನದಿ ನೀರನ್ನು ನಿರ್ಬಂಧಿಸಲು ಯೋಜಿಸುತ್ತಿದೆ. ಕುನಾರ್ ನದಿಗೆ “ಸಾಧ್ಯವಾದಷ್ಟು ಬೇಗನೆ ಅಣೆಕಟ್ಟನ್ನು ನಿರ್ಮಿಸುವ ಆದೇಶವನ್ನು ತಾಲಿಬಾನ್ ಸುಪ್ರೀಂ ನಾಯಕ ಮೌಲಾವಿ ಹಿಬತುಲ್ಲಾ ಅಖುಂದ್ಜಾದಾ ಹೊರಡಿಸಿದ್ದಾರೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಇತ್ತೀಚಿಗೆ ನಡೆದ ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಈ ಆದೇಶ ಬಂದಿದೆ. ಪಾಕಿಸ್ತಾನದೊಂದಿಗೆ ನೀರು ಹಂಚಿಕೆಯ ಬಗ್ಗೆ ಭಾರತದ ನಿರ್ಧಾರದಂತೆ ಇದೀಗ ಅಪ್ಘಾನಿಸ್ತಾನವೂ

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶಗಳ ನೋಡಬಹುದು. ನೀವು ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ದೈನಂದಿನ ದಿನಚರಿಯನ್ನು ಬದಲಾಯಿಸಿಕೊಳ್ಳಬೇಕಾಗಬಹುದು. ವಾಹನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ

ಸಮಗ್ರ ನ್ಯೂಸ್: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ ಆಭರಣ ಅಂಗಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಟ್ಟಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.ದೇವಾಲಯದ ಶ್ರೀಕೋವಿಲ್‌ (ಗರ್ಭಗುಡಿ) ಬಾಗಿಲಿನ ಚೌಕಟ್ಟಿನ ಚಿನ್ನದ ಲೇಪನ ಕೆಲಸಕ್ಕೆ ಹಣಕಾಸು ಒದಗಿಸಿದ ಗೋವರ್ಧನ್‌ ಅವರ ಒಡೆತನದ ಆಭರಣ ಅಂಗಡಿಯನ್ನು ಎಸ್‌‍ಐಟಿ ಶೋಧಿಸಿದೆ ಎಂದು ಮೂಲಗಳು ತಿಳಿಸಿವೆ, ಇದನ್ನು

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ Read More »

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ

ಸಮಗ್ರ ನ್ಯೂಸ್: : ಕರ್ನಾಟಕದ ಮುಧೋಳ ಹೌಂಡ್‌ ಹಾಗೂ ಉತ್ತರ ಪ್ರದೇಶದ ರಾಮ್‌ಪುರ ಎಂಬ ದೇಸಿ ತಳಿಯ 150 ನಾಯಿಗಳಿಗೆ ಇದೇ ಮೊದಲ ಬಾರಿಗೆ ಗಡಿ ರಕ್ಷಣಾ ಪಡೆ (BSF) ತರಬೇತಿ ನೀಡುತ್ತಿದೆ. ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗದ ಗಡಿಗಳಲ್ಲಿ ಮತ್ತು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಕೈಗೊಳ್ಳುವ ಅತ್ಯಂತ ಅಪಾಯಕಾರಿ ಕಮಾಂಡೊ ಕಾರ್ಯಾಚರಣೆಯಲ್ಲಿ ಈ ಎರಡು ತಳಿಯ ನಾಯಿಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಮಧ್ಯಪ್ರದೇಶದ ಟೆಕಾನ್ಪುರ ಎಂಬಲ್ಲಿರುವ ಬಿಎಸ್‌ಎಫ್‌ನ ರಾಷ್ಟ್ರೀಯ ತರಬೇತಿ ಕೇಂದ್ರಕ್ಕೆ

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ Read More »

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ

ಸಮಗ್ರ ನ್ಯೂಸ್: ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದರೆ, ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಸ್ಥಾನದಲ್ಲಿ ಸತ್ಪಾಲ್ ಶರ್ಮಾ ಜಯಗಳಿಸುವುದರೊಂದಿಗೆ ಭಾರತೀಯ ಜನತಾ ಪಕ್ಷ ಒಂದು ರಾಜ್ಯಸಭಾ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಇದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷಕ್ಕೆ ಮಹತ್ವದ ಜಯವಾಗಿದೆ. ಈ ಮೂಲಕ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ Read More »

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ

ಸಮಗ್ರ ನ್ಯೂಸ್: ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕೊನೆಗೊಂಡಿದ್ದು, ಶುಕ್ರವಾರ ನಡೆದ ಹುಂಡಿ ಎಣಿಕೆ ನಂತರದಲ್ಲಿ ಈ ಬಾರಿ ₹25.59 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕ ಕಾಣಿಕೆಯಾಗಿದೆ. ಸುಮಾರು 3೦೦ಕ್ಕೂ ಹೆಚ್ಚು ಸಿಬ್ಬಂದಿ ಎಣಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಭಾರತ್ ಸ್ಕೌಟ್ಸ್‌ ಆಯಂಡ್‌ ಗೈಡ್ಸ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇವರ ಹುಂಡಿಯಲ್ಲಿ ಹಣದ ಜೊತೆಗೆ 75 ಗ್ರಾಂ ಚಿನ್ನ, ೧ ಕೇಜಿ ೫೮ ಗ್ರಾಂ

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ Read More »

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ… Read More »