October 2025

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಕಾಶಭವನ ಅನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ನಗದು, […]

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್ Read More »

ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕಲಿಯುಗದ ಕುಡುಕ ನಾಟಕ ಖ್ಯಾತಿಯ ರಾಜು ತಾಳಿಕೋಟೆ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಸುಮಾರು 300 ಕ್ಕೂ ನಾಟಕಗಳು ಹಾಗೂ 20 ಕ್ಕೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ

ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »

ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು. ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೂ ಮಾತು ಮತ್ತು ಕಿವಿ ಕೇಳುವುದಿಲ್ಲ ಎಂದು ಹೇಳಲಾಗಿದ್ದು, ಮಾಹಿತಿ ದೊರೆತಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌

ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು Read More »

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ. ಕಾಬೂಲ್ ದಾಳಿಗೆ ಪ್ರತಿಕ್ರಿಯೆಯಾಗಿ ತಾಲಿಬಾನ್ ನೇತೃತ್ವದ ಅಫ್ಘಾನ್ ಭದ್ರತಾ ಪಡೆಗಳು ಶನಿವಾರ ತಡರಾತ್ರಿ ಡುರಾಂಡ್ ಲೈನ್ (ಅಫ್ಘಾನ್-ಪಾಕಿಸ್ತಾನ ಗಡಿ) ದಾಟಿ ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳ ಮೇಲೆ ದಾಳಿ ಮಾಡಿವೆ. ಗಡಿ ಪ್ರಾಂತ್ಯಗಳಿಂದ ಅಫ್ಘಾನ್ ಪಡೆಗಳು ಏಕಕಾಲಕ್ಕೆ ಪಾಕ್ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿವೆ. ಏಳು ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳು

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ Read More »

ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ

ಸಮಗ್ರ ನ್ಯೂಸ್: ಕಾಂಗ್ರೆಸ್‌ನೊಳಗೆ ರಾಜ್ಯದ ಸಾರ್ವಜನಿಕ‌ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವ ಕೂಗೆದ್ದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ವಿವಾದದ ಕಿಡಿ ದೊಡ್ಡದಾಗಿ ಹತ್ತಿಕೊಂಡಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಅವರು

ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ Read More »

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ Read More »

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ಕಾನೂನು ತಂದಿದೆ. ಇದಕ್ಕೂ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಶ್ರೀಮಂತರ ಹೆಣ್ಣು ಮಕ್ಕಳಿಗೆ ಸೌಲಭ್ಯ ಇರುತ್ತದೆ. ದುಡಿಯುವ ವರ್ಗದ ಹೆಣ್ಣುಗಳಿಗೆ ಸರ್ಕಾರ ವರ್ಷಕ್ಕೆ 12 ವೇತನ ಸಹಿತ ರಜೆ ಘೋಷಿಸಿ ಈ ನೀತಿಯನ್ನು ಜಾರಿ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್ Read More »

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಾಂತಿಗೋಡು ಆನಡ್ಕ ಗ್ರಾಮದಲ್ಲಿ ನಡೆದಿದೆ. ವಾಮನ(40) ಮೃತಪಟ್ಟವರುಎಂದು ಹೇಳಲಾಗಿದೆ. ಶನಿವಾರ ಸಂಜೆ ಸುಮಾರು 5.30 ರ ವೇಳೆ ವಾಮನ ಅವರು ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ವಾಮನ ಮನೆಯಲ್ಲಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಮೇಷ ರಾಶಿ:ಈ ವಾರ ನಿಮ್ಮ ಅದೃಷ್ಟ ಬದಲಾಗಬಹುದು. ನೀವು ಹಲವು ಕೆಲಸಗಳಲ್ಲಿ ಭಾಗಿಯಾಗಬೇಕಾಗುತ್ತದೆ. ಅದ್ರಲ್ಲೂ ಶುಭ ಕಾರ್ಯ ಸಂಬಂಧವಾಗಿ ಪ್ರಯಾಣಗಳ ಮಾಡುವಿರಿ. ಪ್ರೀತಿ ಮತ್ತು ಮಕ್ಕಳ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು

ಸಮಗ್ರ ನ್ಯೂಸ್: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತರನ್ನು ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಎಂದು ಗುರುತಿಸಲಾಗಿದೆ. ಅಕ್ಟೋಬರ್ 10 ರಂದು ಸಂಜೆ ವಿದ್ಯಾರ್ಥಿಗಳಾದ ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಮತ್ತು

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು Read More »