October 2025

ನೊಬೆಲ್ ಸಿಗದ ಕೋಪಕ್ಕೆ ಟ್ರಂಪ್ ಕೆಂಗಣ್ಣಿಗೆ ಗುರಿಯಾದ ಚೀನಾ| ಶೇ.100 ಸುಂಕ ವಿಧಿಸಿ ಆದೇಶ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಚೀನಾದ ಮೇಲೆ 100% ಹೆಚ್ಚುವರಿ ಸುಂಕವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಸಭೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಸ್ತುತ, ಟ್ರಂಪ್ ಅವರ ಹಿಂದಿನ ನಿರ್ಧಾರಗಳ ಪರಿಣಾಮವಾಗಿ ಚೀನಾದ ಉತ್ಪನ್ನಗಳ ಮೇಲೆ 30% ಯುಎಸ್ ಸುಂಕವನ್ನು ಈಗಾಗಲೇ ವಿಧಿಸಲಾಗಿದೆ. ಇದು ಅಮೆರಿಕ ಮತ್ತು ಚೀನಾ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧವನ್ನು ಮತ್ತೆ ಪ್ರಚೋದಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಚೀನಾದ ಮೇಲೆ […]

ನೊಬೆಲ್ ಸಿಗದ ಕೋಪಕ್ಕೆ ಟ್ರಂಪ್ ಕೆಂಗಣ್ಣಿಗೆ ಗುರಿಯಾದ ಚೀನಾ| ಶೇ.100 ಸುಂಕ ವಿಧಿಸಿ ಆದೇಶ Read More »

ಬೆಳ್ತಂಗಡಿ: ಬಸ್ ನಲ್ಲಿ ನಿರ್ವಾಹಕಿ ಮತ್ತು ಪ್ರಯಾಣಿಕನ ನಡುವೆ ಗಲಾಟೆ

ಸಮಗ್ರ ನ್ಯೂಸ್: ಕೆಎಸ್‌ಆರ್ ಟಿಸಿ ಬಸ್ ನ ಲೇಡಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ಅಕ್ಟೋಬರ್ 10ರಂದು ನಡೆದಿದೆ. ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ ಹತ್ತಿದ ಪ್ರಯಾಣಿಕ ಟಿಕೆಟ್ ಹಣ ಕೊಟ್ಟಿದ್ದೇನೆ ಅಂತ ವಾದಿಸುತ್ತಿದ್ದರೆ, ಲೇಡಿ ಕಂಡಕ್ಟರ್ ಹಣ ಕೊಟ್ಟಿಲ್ಲ ಅಂತ ವಾದಿಸುತ್ತಿದ್ದರು.‌ ಬಸ್ ನಲ್ಲಿದ್ದ ಪ್ರಯಾಣಿಕರು ಆತ ಹಣ ಕೊಟ್ಟಿದ್ದಾನೆ

ಬೆಳ್ತಂಗಡಿ: ಬಸ್ ನಲ್ಲಿ ನಿರ್ವಾಹಕಿ ಮತ್ತು ಪ್ರಯಾಣಿಕನ ನಡುವೆ ಗಲಾಟೆ Read More »

ದೈವ ಹೇಳಿದ್ದಾ? ದೈವ ನರ್ತಕ ಹೇಳಿದ್ದಾ? ಪಿಲಿಚಂಡಿ ದೈವ ನುಡಿ ಬಗ್ಗೆ ಜಾಲತಾಣಗಳಲ್ಲಿ ಪರ-ವಿರೋಧ ಕುರಿತು ಚರ್ಚೆ

ಸಮಗ್ರ ನ್ಯೂಸ್: ಕಾಂತಾರ ಚಾಪ್ಟರ್ 1 ಈಗಾಗಲೇ 500 ಕೋಟಿಗೂ ಅಧಿಕ ಹಣ ಮಾಡಿ ಮುಂದುವರೆಯುತ್ತಿದೆ. ಈ ನಡುವೆ ದೈವಗಳ ಅವಹೇಳನವೂ ಕೂಡ ಮುಂದುವರೆದಿದ್ದು, ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ದೈವದ ನುಡಿಯ ಬಗ್ಗೆಯೇ ಅಪಹಾಸ್ಯ ಮಾಡುವ ಮಟ್ಟಿಗೆ ಪರ ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಾರಂಭವಾಗಿದೆ. ಕಾಂತಾರ ಸಿನೆಮಾ ಬಿಡುಗಡೆಯಾದ ಬಳಿಕ ಇದೀಗ ಕರಾವಳಿಯಲ್ಲಿ ಚಿತ್ರದಲ್ಲಿ ದೈವಾರಾಧನೆ ಬಳಸಿದ ಬಗ್ಗೆ ಪರ ವಿರೋಧ ಚರ್ಚೆ ಪ್ರಾರಂಭವಾಗಿದೆ. ಈ ಮಧ್ಯೆ ತುಳುನಾಡು ದೈವಗಳ ನುಡಿಗಳ ಬಗ್ಗೆಯೇ

ದೈವ ಹೇಳಿದ್ದಾ? ದೈವ ನರ್ತಕ ಹೇಳಿದ್ದಾ? ಪಿಲಿಚಂಡಿ ದೈವ ನುಡಿ ಬಗ್ಗೆ ಜಾಲತಾಣಗಳಲ್ಲಿ ಪರ-ವಿರೋಧ ಕುರಿತು ಚರ್ಚೆ Read More »

ವೆನೆಜುವೆಲಾದ ಮರಿಯಾ ಕೊರಿನಾಗೆ ನೊಬೆಲ್ ಶಾಂತಿ ಪುರಸ್ಕಾರ| ನನಸಾಗದ ಟ್ರಂಪ್ ಕನಸು

ಸಮಗ್ರ ನ್ಯೂಸ್: ಸ್ವಯಂ ಘೋಷಿತ ಶಾಂತಿಧೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಭಾರೀ ಮುಖಭಂಗವಾಗಿದೆ. ಇಂದು ನೊಬೆಲ್ ಶಾಂತಿ ಪುರಸ್ಕಾರದ ವಿಜೇತರ ಹೆಸರು ಘೋಷಿಸಲಾಗಿದೆ. ಆದರೆ, ಆ ಪಟ್ಟಿಯಲ್ಲಿ ಡೊನಾಲ್ಡ್ ಟ್ರಂಪ್ ಹೆಸರು ಇರಲಿಲ್ಲ. ಟ್ರಂಪ್ ಬದಲಿಗೆ ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮರಿಯಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ ಒಲಿದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕನಸು ನನಸಾಗಿಲ್ಲ. 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ತಲೆಮರೆಸಿಕೊಂಡಿರುವ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ

ವೆನೆಜುವೆಲಾದ ಮರಿಯಾ ಕೊರಿನಾಗೆ ನೊಬೆಲ್ ಶಾಂತಿ ಪುರಸ್ಕಾರ| ನನಸಾಗದ ಟ್ರಂಪ್ ಕನಸು Read More »

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪದಲ್ಲಿ ಜಾಮೀನು ಅರ್ಜಿ ವಜಾ| ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ|

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಶಾಕ್ ಕೊಟ್ಟಿದೆ. ಮಹೇಶ್​ ಶೆಟ್ಟಿ ತಿಮರೋಡಿ ನಿರೀಕ್ಷಣಾ ಬೇಲ್ ವಜಾ ಮಾಡಿದ್ದು, ಬಂಧನ ಭೀತಿ ಎದುರಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸಿಲುಕಿರುವ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಬೇಲ್​ ಅರ್ಜಿ ಸಲ್ಲಿಸಿದ್ದರು. ಆದರೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಅರ್ಜಿ ವಜಾ ಮಾಡಿದೆ. ‘ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಯ ಗಡಿಪಾರು ಆದೇಶ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪದಲ್ಲಿ ಜಾಮೀನು ಅರ್ಜಿ ವಜಾ| ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ| Read More »

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಎರಡು ಕೊಲೆ ಪ್ರಕರಣಗಳು ವರದಿಯಾಗಿದ್ದು, ಇದೀಗ 9 ವರ್ಷದ ಅಲೆಮಾರಿ ಬಾಲಕಿ ಅತ್ಯಾಚಾರ ಮತ್ತು ಕೊಲೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಸರಾ ಸಂಭ್ರಮದ ನಡುವೆಯೇ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ಈ ನೀಚ ಕೃತ್ಯ ನಡೆದಿದೆ. ಮೃತ ಬಾಲಕಿಯನ್ನು ಗುಲ್ಬರ್ಗಾ ಮೂಲದ ಅಲೆಮಾರಿ ಜನಾಂಗಕ್ಕೆ ಸೇರಿದ ರಾಧಿಕಾ (9) ಎಂದು ಗುರುತಿಸಲಾಗಿದೆ. ತಂದೆ ದೇಸಿ ಹಾಗೂ ತಾಯಿ

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು Read More »

ನನ್ನ ಹೆಸರಿನಲ್ಲಿ ದುಡ್ಡು ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ ಎಂದ ದೈವ| ಕಾಂತಾರ ಕುರಿತು ದೈವದ ಮುಂದೆ ಅಸಮಾಧಾನ ನೋಡಿಕೊಂಡ ದೈವಾರಾಧಕರು

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾಗಳ ಬಗ್ಗೆ ಕೆಲ ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇಂದು ದೈವದ ಮುಂದೆಯೇ ಈ ಬಗ್ಗೆ ದೂರು ಹೇಳಿದ್ದಾರೆ. ಕಾಂತಾರ ಸಿನಿಮಾದ ಮೂಲಕ ದೈವಾರಾಧನೆಗೆ ಅಪಚಾರ ಮಾಡಲಾಗಿದೆ ಎಂದು ಪಿಲಿಚಂಡಿ, ಬಲವಂಡಿ ದೈವದ ಮೊರೆ ಹೋದ ದೈವ ನರ್ತಕರು, ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರು ಹೊರವಲಯದ ಬಜಪೆ ಸಮೀಪದ ‌ಶ್ರೀ ಕ್ಷೇತ್ರ ಪೆರಾರ, ಬ್ರಹ್ಮದೇವರು,ಇಷ್ಟ ದೇವತಾ ಬಲವಂಡಿ, ಪಿಲಿಚಂಡಿ ದೈವಸ್ಥಾನ, ಬಲವಂಡಿ, ಪಿಲಿಚಂಡಿ ದೈವದ ಮುಂದೆ ದೈವಾರಾಧನೆಯ ಅಪಹಾಸ್ಯದ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ನನ್ನ ಹೆಸರಿನಲ್ಲಿ ದುಡ್ಡು ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ ಎಂದ ದೈವ| ಕಾಂತಾರ ಕುರಿತು ದೈವದ ಮುಂದೆ ಅಸಮಾಧಾನ ನೋಡಿಕೊಂಡ ದೈವಾರಾಧಕರು Read More »

ರಾಜ್ಯ ಸಚಿವ ಸಂಪುಟ ಸಭೆ| ಇಂದಿರಾ ಕಿಟ್, ಮುಟ್ಟಿನ ರಜೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟವು ಇಂದು (ಅ.9) ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿದ್ದ 5 ಕೆ.ಜಿ. ಅಕ್ಕಿಯನ್ನು ಕಡಿತಗೊಳಿಸಿ, ಅದರ ಬದಲಿಗೆ ಇಂದಿರಾ ಆಹಾರ ಕಿಟ್‌ಗಳನ್ನು ವಿತರಿಸಲು ತೀರ್ಮಾನಿಸಿದೆ. ಇದರ ಜೊತೆಗೆ ಸರ್ಕಾರಿ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಅವಧಿಯಲ್ಲಿ ರಜೆ ನೀಡುವ ಐತಿಹಾಸಿಕ ನಿರ್ಧಾರಕ್ಕೂ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟದ ನಿರ್ಧಾರದಂತೆ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆ.ಜಿ. ಅಕ್ಕಿ

ರಾಜ್ಯ ಸಚಿವ ಸಂಪುಟ ಸಭೆ| ಇಂದಿರಾ ಕಿಟ್, ಮುಟ್ಟಿನ ರಜೆಗೆ ಗ್ರೀನ್ ಸಿಗ್ನಲ್ Read More »

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ Read More »