ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget ... .. Ad Widget .

ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ.

Ad Widget

ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ 15 ತಿಂಗಳ ಮಗುವೂ ಸೇರಿದೆ.

ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *