November 2025

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು

ಸಮಗ್ರ ನ್ಯೂಸ್: 150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದುದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ […]

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು Read More »

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 02.11.25 ರಿಂದ 08.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಮೇಷ ರಾಶಿಯವರ ಆರೋಗ್ಯ ಸ್ವಲ್ಪ ಮಧ್ಯಮವಾಗಿರುತ್ತದೆ. ಪ್ರೀತಿ ಮತ್ತು ಮಕ್ಕಳ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ. ವ್ಯವಹಾರ ಪರಿಸ್ಥಿತಿ ಉತ್ತಮವಾಗಿದೆ. ಸರ್ಕಾರಿ ವ್ಯವಸ್ಥೆಯಿಂದ ಲಾಭಗಳು. ಉದ್ಯೋಗ ಪರಿಸ್ಥಿತಿ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು

ಸಮಗ್ರ ನ್ಯೂಸ್: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನಪ್ಪಿದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ (6) ಎಂದು ತಿಳಿದು ಬಂದಿದೆ. ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು Read More »

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರ ದಟ್ಟಣೆಯಿಂದಾಗಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಹಠಾತ್ ಕಾಲ್ತುಳಿತ ಉಂಟಾಯಿತು. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿದರು. ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಅಪಘಾತದ ಸ್ಥಳಕ್ಕೆ ತಕ್ಷಣ ಧಾವಿಸಿದರು. ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಲು ಅವರು ದೇವಾಲಯದ ಅಧಿಕಾರಿಗಳೊಂದಿಗೆ ಮಾತನಾಡಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ Read More »

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ.ಜಿಲ್ಲಾಡಳಿತ ಶುಕ್ರವಾರ ಘೋಷಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರು: ಅಶೋಕ್ ಪೂವಯ್ಯ, ರಜನಿ ದಾಮೋದರ ಶೆಟ್ಟಿ, ವಿಜಯ ಸುವರ್ಣ, ಮುಹಮ್ಮದಲಿ ಉಚ್ಚಿಲ್, ಹಾಜಿ ಬಿ.ಎಚ್. ಖಾದರ್, ಪ್ರವೀಣ್ ಶೆಟ್ಟಿ ಪಿಲಾರ್, ಧರ್ಮಭಗಿನಿ ಲೂಸಿಯಾನ ಪಿಂಟೋ, ಇಸ್ಮಾಯೀಲ್ ಶಾಫಿ ಬಬ್ಬುಕಟ್ಟೆ, ಅನಿಲ್ ದಾಸ್, ಗಂಗಾಧರ ಎಸ್.ಪೂಜಾರಿ, ಮುಹಮ್ಮದ್ ಮುಕ್ಕಚೇರಿ, ಗಣೇಶ್ ಎಸ್., ಮೋಹನ ರೈ, ಸುದರ್ಶನ್ ಪಡಿಯಾರ್, ಬಿ.

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಕುರಿತು ನಡೆಸುತ್ತಿದ್ದ ತನಿಖೆಯನ್ನು ಎಸ್‌ಐಟಿ ಸ್ಥಗಿತಗೊಳಿಸಿದೆ. ಹೈಕೋ‌ರ್ಟ್‌ ಮಧ್ಯಂತರ ತಡೆ ನೀಡಿರುವ ಕಾರಣ ನಿಲ್ಲಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಸಂಬಂಧಿಸಿದ ವಿಚಾರಣೆಯನ್ನು ಸಮಾಪ್ತಿಗೊಳಿಸಲು ಆದೇಶಿಸಬೇಕು’ ಎಂದು ಗಿರೀಶ ಮಟ್ಟೆಣ್ಣವರ, ಮಹೇಶ್‌ ಶೆಟ್ಟಿ ತಿಮರೋಡಿ, ಜಯಂತ್‌ ಟಿ. ಮತ್ತು ವಿಠ್ಠಲ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ‘ಕೋರ್ಟ್‌ ಆದೇಶವು ತನಿಖೆಗೆ ಹಿನ್ನಡೆಯಾಗುವುದಿಲ್ಲ. ಇದು ತಾತ್ಕಾಲಿಕ ವಿರಾಮವಾಗಿದೆ. ಎಸ್‌ಐಟಿ ಕೋರ್ಟ್‌

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ Read More »

ವಿಜಯಪುರ, ಕಲಬುರಗಿಯಲ್ಲಿ ಕಂಪಿಸಿದ ಭೂಮಿ| ಆತಂಕದಲ್ಲಿ ಮನೆಯಿಂದ ಹೊರಬಂದ ಜನತೆ

ಸಮಗ್ರ ನ್ಯೂಸ್: ವಿಜಯಪುರ, ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಈ ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ ಭೂಮಿ ಕಂಪಿಸಿದೆ. ಅದೇ ರೀತಿ ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. ಎರಡು ತಿಂಗಳಲ್ಲಿ ಬರೋಬ್ಬರಿ 12 ಬಾರಿ ಭೂಮಿ ಕಂಪಿಸಿದೆ.

ವಿಜಯಪುರ, ಕಲಬುರಗಿಯಲ್ಲಿ ಕಂಪಿಸಿದ ಭೂಮಿ| ಆತಂಕದಲ್ಲಿ ಮನೆಯಿಂದ ಹೊರಬಂದ ಜನತೆ Read More »