December 2025

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖೆ ಕುರಿತಂತೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರೋದು ಸತ್ಯ, ಈ ವೇಳೆ ನಮ್ಮ ಜೊತೆಗೆ ಸೌಜನ್ಯನ ಮನೆಯವರಿದ್ದರು,ಸೌಜನ್ಯ ಪರ ಹೋರಾಟಗಾರರಿದ್ದರು. ಈ ವೇಳೆ ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆ ಕಾಲ ಸ್ವಾಮೀಜಿಯ ಮುಂದೆಯೇ ಚಿನ್ನಯ್ಯ ಎಲ್ಲವನ್ನೂ ಅವನು ಬಿಡಿಸಿ ಹೇಳಿದ್ದಾನೆ. ನಾನು ಬಿಡುಗಡೆ ಮಾಡಿದ ಒಂದೂವರೆ […]

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ

ಸಮಗ್ರ‌ ನ್ಯೂಸ್: ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ. ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 07.12.25 ರಿಂದ 13.12.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲ ನೀಡಲಿದೆ. ನೀವು ಸ್ವಲ್ಪ ಸಮಯದಿಂದ ಸಮಸ್ಯೆಯಿಂದ ಬಳಲುತ್ತಿದ್ದರೆ, ಈ ವಾರ ಅದು ಮುಂದುವರಿಯಬಹುದು. ಯೋಜಿತ ಕೆಲಸಗಳಿಗೆ ಅಡೆತಡೆಗಳು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ Read More »

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!!

ಸಮಗ್ರ ನ್ಯೂಸ್: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!! Read More »

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ

ಸಮಗ್ರ ನ್ಯೂಸ್: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು.

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ Read More »

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಪರಿಶೀಲಿಸಿದಾಗ ಅದು ಎಐ ಬಳಸಿ ಡೀಪ್ ಫೇಲ್ ವಿಡಿಯೋ ರಚಿಸಲಾಗಿದೆ ಎಂಬುದು ತಿಳಿದು ಬಂದಿದೆ. ಅಪರಿಚಿತರ ವಿರುದ್ಧ ಮಲ್ಲೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು Read More »

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಬಂಧಿತ ವ್ಯಕ್ತಿಗಳ ಚಟುವಟಿಕೆ, ಹಣಕಾಸಿನ ಮೂಲ, ಸಂಚಲನ ಮತ್ತು ಸಂಪರ್ಕ ವಲಯಗಳ ಕುರಿತು ಸಮಗ್ರ ತನಿಖೆ ನಡೆಸಲು ಕೇಳಿ ಸಲ್ಲಿಸಲಾದ ದೂರಿನ ಬಗ್ಗೆ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಎಂಬಂತೆ ಕಾಣುವ ಸಂಘಟಿತ ಷಡ್ಯಂತ್ರದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ Read More »