January 2026

ಕಡಬ: ತಂದೆಗೆ ಚೂರಿ ಇರಿದು ಕೋವಿಯಿಂದ‌ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಮಗ| ತಂದೆ ಗಂಭೀರ, ಮಗ ದುರ್ಮರಣ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ 17 ವರ್ಷದ ಬಾಲಕನೋರ್ವ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ​ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ (17) ಮೃತಪಟ್ಟ ದುರ್ದೈವಿ. ಮೂಲತಃ ಕೇರಳದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. […]

ಕಡಬ: ತಂದೆಗೆ ಚೂರಿ ಇರಿದು ಕೋವಿಯಿಂದ‌ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಮಗ| ತಂದೆ ಗಂಭೀರ, ಮಗ ದುರ್ಮರಣ Read More »

ಚಂದ್ರ ಇಂದು ನಗ್ತಾನೆ! ನೋಡಲು ಮರೆಯದಿರಿ

ಸಮಗ್ರ ನ್ಯೂಸ್: ಚಂದ್ರ ಸೃಷ್ಟಿಯ ಕುತೂಹಲಕಾರಿ ಗ್ರಹ. ಚಂದ್ರನನ್ನು ಅರ್ಥ ಮಾಡಿಕೊಳ್ಳುವುದು, ಆತನನ್ನು ನೋಡಿ ವರ್ಣಿಸಿದಷ್ಟು ಸುಲಭವಲ್ಲ.  ಪ್ರತಿ ದಿನವೂ ಬೇರೆ ಬೇರೆ ರೀತಿಯಲ್ಲೇ ಕಾಣುತ್ತಾನೆ. ಚಂದ್ರ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಮಗುವನ್ನು ತೊಡೆಯ ಮೇಲೆ ಕೂರಿಸಿ ಊಟ ಮಾಡಿಸಲು ತಾಯಿಗೂ ಚಂದಮಾಮನೇ ಬೇಕು, ಪ್ರಿಯಕರನಿಗೆ ಪ್ರೇಯಸಿಯ ಬಣ್ಣ ವರ್ಣಿಸಲು ಈ ಚಂದ್ರನೇ ಬೇಕು. ಚಂದ್ರನನ್ನು ಇಷ್ಟಪಡದವರೇ ಇಲ್ಲ. ಆದರೆ ನೀವು ಚಂದ್ರನನ್ನು ಕಂಡು ನಕ್ಕಿದ್ದೀರಿ ಆದರೆ ಅವನು ನಕ್ಕಿರುವುದನ್ನು ಕಂಡಿದ್ದೀರಾ?. ಹಾಗಾದರೆ ಇಂದು

ಚಂದ್ರ ಇಂದು ನಗ್ತಾನೆ! ನೋಡಲು ಮರೆಯದಿರಿ Read More »

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್ ಅನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ Read More »

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಥಟ್ಟನೆ ಪ್ರಸಿಯ ಪಡೆದಿರುವ ನಾಗುರಿ ಆಶಾ(Ashapandith) ರವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದಿಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಹಟ್ಟತ್ತನೆ ಪ್ರಸಿದ್ದಿ ಪಡೆದಿರುವ ಅವರು ತನ್ನ ಬೈಗುಳದಿಂದಲೇ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದರು.ಅವರಿಗೆ ರಾತ್ರಿ ವೇಳೆ ಎದೆ ನೋವು ಉಂಟಾಗಿ ತ ವಾಂತಿ ಮಾಡಿದ್ದು ಇಂದು(ಜ.23) ಬೆಳಗಿನ ಜಾವ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು Read More »

ಸಿವಿಲ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಸಾಮಾನ್ಯ ವರ್ಗದ ವಯೋಮಿತಿಯನ್ನು 40 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದುವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇತ್ತು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ

ಸಿವಿಲ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ Read More »

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ Read More »

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. 17 ಸವಾರರು ಸಂಚರಿಸುತ್ತಿದ್ದ ಸೇನಾ ವಾಹನವೊಂದು ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಘಟನೆಯಲ್ಲಿ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಸೈನಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, ‘ಪ್ರತಿಕೂಲ ಹವಾಮಾನ ಮತ್ತು ಕಳಪೆ ಗೋಚರತೆಯ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ವಾಹನವೊಂದು ಸ್ಕಿಡ್ ಆಗಿ ಕಂದಕಕ್ಕೆ

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು Read More »

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ

ಸಮಗ್ರ ನ್ಯೂಸ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡುತ್ತಿರುವ ಪುತ್ತೂರಿನ ವ್ಯಕ್ತಿಯೊಬ್ಬರು , ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಅದರಲ್ಲಿದ್ದ ವಾಟ್ಸಾಫ್ ಗ್ರೂಪ್ ಗೆ ಸೇರಿ ಅಲ್ಲಿ ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡಿದ್ದಾರೆ. ಪುತ್ತೂರಿನ ನಿವಾಸಿಯಾಗಿರುವ ವ್ಯಕ್ತಿ ಈ ಹಿಂದೆ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. 15-11-2025 ರಂದು ಫೇಸ್‌ಬುಕ್‌ನಲ್ಲಿ ಹೆಚ್ಚು ಲಾಭಾಂಶದ ಜಾಹೀರಾತು ನೋಡಿ ವಾಟ್ಸಪ್ ಗ್ರೂಪ್‌ಗೆ ಸೇರಿರುತ್ತಾರೆ. ಸದ್ರಿ ಗ್ರೂಪ್ ಹಾಗೂ ವಾಟ್ಸಪ್

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್

ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿನ ಬಿಕ್ಕಟ್ಟುಗಳು ತೀವ್ರಗೊಂಡಿರುವುದು ಹಾಗೂ ಜಾಗತಿಕ ಷೇರುಪೇಟೆಗಳಲ್ಲಿನ ಮಂದಗತಿಯ ವಹಿವಾಟು ಮಂಗಳವಾರ ಭಾರತದ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದವು. ಇದರಿಂದಾಗಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1,065 ಅಂಶ ಕುಸಿಯಿತು. ಮಂಗಳವಾರದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹9.86 ಲಕ್ಷ ಕೋಟಿಯಷ್ಟು ಕರಗಿತು. ಅಮೆರಿಕದ ಡಾಲರ್ ಎದುರು ರೂಪಾಯಿ ದುರ್ಬಲವಾಗಿದ್ದುದು, ವಿದೇಶಿ ಹೂಡಿಕೆಯ ಹೊರಹರಿವು ಕೂಡ ಹೂಡಿಕೆದಾರರ ಉತ್ಸಾಹ ತಗ್ಗಿಸಿದವು ಎಂದು ವರ್ತಕರು ಹೇಳಿದ್ದಾರೆ. ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕವು 353 ಅಂಶಗಳಷ್ಟು ಕುಸಿದಿದೆ.

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ Read More »