ಸಮಗ್ರ ನ್ಯೂಸ್: ಹಕ್ಕುಪತ್ರವನ್ನು ರದ್ದುಪಡಿಸಿದ ಹಿನ್ನೆಲೆ ತಾಲೂಕು ಕಛೇರಿ ಎದುರು ಕುಳಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಟ್ಟು ಹಿಡಿದ ಘಟನೆ ಕಡಬದಲ್ಲಿ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯ ಮಂಜೂರಾದ ಹಕ್ಕುಪತ್ರವನ್ನು ರದ್ದುಪಡಿಸಿದ ಹಿನ್ನೆಲೆ ಆತ ಆತಂಕಗೊಂಡು ತಾಲೂಕು ಕಛೇರಿ ಎದುರು ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಟ್ಟು ಹಿಡಿದಿದ್ದಾರೆ.
ನಾಗೇಶ್ (ಡ್ರೈವರ್), ಮಧುಮೇಹ ರೋಗದಿಂದ ಬಳಲುತ್ತಿದ್ದು, ಹಕ್ಕುಪತ್ರ ರದ್ದುಗೊಂಡಿರುವುದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಸಮಾಧಾನಪಡಿಸಲು ಯತ್ನಿಸಿದ್ದಾರೆ.






