March 2026

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ|

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ […]

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ| Read More »

ಸಂತ್ರಸ್ತೆಯ ಪರವಾಗಿ ತಾಯಿಯಂತೆ ನಿಲ್ಲುತ್ತೇನೆ – ಡಾ. ನಾಗಲಕ್ಷ್ಮಿ ಚೌಧರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿನ ತಾರಿಗುಡ್ಡೆಗೆ ಭೇಟಿ ನೀಡಿ, ಮದುವೆಯಾಗುವುದಾಗಿ ನಂಬಿಸಿ ವಂಚನೆಗೊಳಗಾದ ಸಂತ್ರಸ್ತ ಯುವತಿಗೆ ಸಾಂತ್ವನ ಹೇಳಿದರು. ಮಾರ್ಚ್ 5ರಂದು ಸಂತ್ರಸ್ತೆಯ ಮನೆಗೆ ತೆರಳಿದ ಅಧ್ಯಕ್ಷರು, ನೊಂದ ಕುಟುಂಬದ ಅಹವಾಲನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು. ಮಹಿಳಾ ಆಯೋಗವು ಯಾವಾಗಲೂ ನೊಂದ ಮಹಿಳೆಯರ ಪರವಾಗಿ ತಾಯಿಯ ಸ್ಥಾನದಲ್ಲಿ ನಿಂತು ರಕ್ಷಣೆ ನೀಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸಂತ್ರಸ್ತೆಯ ಪರವಾಗಿ ತಾಯಿಯಂತೆ ನಿಲ್ಲುತ್ತೇನೆ – ಡಾ. ನಾಗಲಕ್ಷ್ಮಿ ಚೌಧರಿ Read More »

ರಾಜ್ಯ ಬಜೆಟ್| ದ.ಕ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ಮಂಜೂರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 12 ನೂತನ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ರಾಜ್ಯಸರ್ಕಾರ ಮುಂದಾಗಿದೆ. ಅದರಲ್ಲಿ ದಕ್ಷಿಣಕನ್ನಡ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ದೊರೆಯಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜನಸಂಖ್ಯೆ ಹೆಚ್ಚಳ , ನಗರೀಕರಣ ಮತ್ತು ಕೈಗಾರಿಕಾ ವಲಯಗಳ ವಿಸ್ತರಣೆ ಹಿನ್ನೆಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ಹೊಸ ಠಾಣೆಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ . ಇದರಿಂದ ಸ್ಥಳೀಯ ಮಟ್ಟದಲ್ಲಿ ಅಪರಾಧ ನಿಯಂತ್ರಣ , ಸಂಚಾರ ವ್ಯವಸ್ಥೆಯ ಸುಧಾರಣೆ

ರಾಜ್ಯ ಬಜೆಟ್| ದ.ಕ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ಮಂಜೂರು Read More »

ಅಮೇರಿಕಾ ದಾಳಿ ಬೆನ್ನಲ್ಲೇ ಇರಾನ್ ಹಡಗಿಗೆ ಭಾರತ ಆಶ್ರಯ| ಕೊಚ್ಚಿಯಲ್ಲಿ ಲಂಗರು ಹಾಕಿದ IRIS ಲಾವನ್

ಸಮಗ್ರ ನ್ಯೂಸ್: ವಿಶಾಖಪಟ್ಟಣದಲ್ಲಿ ನಡೆದ ಜಂಟಿ ನೌಕಾ ಸಮರಾಭ್ಯಾಸಕ್ಕೆ ಬಂದಿದ್ದ ಇರಾನ್‌ನ ಒಂದು ಹಡಗು ಈಗ ಕೊಚ್ಚಿಯಲ್ಲಿದೆ ಅನ್ನೋದು ಖಚಿತಪಟ್ಟಿದೆ. IRIS ಲಾವನ್ ಹೆಸರಿನ ಈ ಹಡಗನ್ನು ಕೊಚ್ಚಿಯಲ್ಲಿ ನಿಲ್ಲಿಸಲು ಭಾರತ ಅನುಮತಿ ನೀಡಿದೆ. ಇಸ್ರೇಲ್ ಮತ್ತು ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸಿದ 28ನೇ ತಾರೀಖಿನಂದೇ ಇರಾನ್, ತನ್ನ ಹಡಗನ್ನು ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತ್ತು. ರ್ಕಾರಿ ಮೂಲಗಳ ಪ್ರಕಾರ, ಭಾರತವು 1ನೇ ತಾರೀಖು ಅನುಮತಿ ನೀಡಿದ್ದು, ಹಡಗು 4ನೇ ತಾರೀಖು ಕೊಚ್ಚಿ ತೀರಕ್ಕೆ

ಅಮೇರಿಕಾ ದಾಳಿ ಬೆನ್ನಲ್ಲೇ ಇರಾನ್ ಹಡಗಿಗೆ ಭಾರತ ಆಶ್ರಯ| ಕೊಚ್ಚಿಯಲ್ಲಿ ಲಂಗರು ಹಾಕಿದ IRIS ಲಾವನ್ Read More »

ಅಸ್ಸಾಂ: ಪತನಗೊಂಡ ಸುಖೋಯ್ 30 ಯುದ್ಧ ವಿಮಾನ; ಪೈಲಟ್ ಗಳು ಕಣ್ಮರೆ

ಸಮಗ್ರ ನ್ಯೂಸ್: ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆಗಿ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಪ್ರಕಟಿಸಿದೆ. ಜೋರ್ಹಟ್ ನಿಂದ 60 ಕಿಲೋಮೀಟರ್ ದೂರದಲ್ಲಿ ತರಬೇತಿ ನೀಡುತ್ತಿದ್ದ ಯುದ್ಧವಿಮಾನ ಪತಗೊಂಡಿದ್ದು, ಇಬ್ಬರು ಪೈಲಟ್ ಗಳ ಸುಳಿವು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಅಸ್ಸಾಂನ ವಾಯುನೆಲೆಯಿಂದ ಟೇಕಾಫ್ ಆದ ಬಳಿಕ ಸುಖೋಯ್-30 ಎಂಕೆಐ ಯುದ್ಧವಿಮಾನ ಗುರುವಾರ ರಾತ್ರಿ ಸಂಪರ್ಕ ಕಡಿದುಕೊಂಡಿತ್ತು. ವ್ಯಾಪಕ ಶೋಧ ಕಾರ್ಯಾಚರಣೆ ಹಾಗೂ

ಅಸ್ಸಾಂ: ಪತನಗೊಂಡ ಸುಖೋಯ್ 30 ಯುದ್ಧ ವಿಮಾನ; ಪೈಲಟ್ ಗಳು ಕಣ್ಮರೆ Read More »

ತೈಲ‌ ಆಮದಿನಲ್ಲಿ ಭಾರತಕ್ಕೆ ಬಿಗ್ ರಿಲೀಫ್ ನೀಡಿದ ಇರಾನ್

ಸಮಗ್ರ ನ್ಯೂಸ್: ಜಗತ್ತಿಗೆ ತೈಲ ಮತ್ತು ಇತರ ಸರಕುಗಳ ಪ್ರಮುಖ ಸಾರಿಗೆ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಕುರಿತು ಇರಾನ್ ಪ್ರಮುಖ ಹೇಳಿಕೆ ನೀಡಿದೆ. ಈ ಜಲಸಂಧಿಯನ್ನು ನಿಯಂತ್ರಿಸುವ ಅಧಿಕಾರ ನಮಗಿದೆ ಎಂದು ಅದು ಸ್ಪಷ್ಟಪಡಿಸಿದೆ. ಇತ್ತೀಚಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ದೇಶಗಳಿಗೆ ತೈಲ ಸರಬರಾಜನ್ನು ನಿಲ್ಲಿಸಲು ಬಯಸುವುದಿಲ್ಲ ಮತ್ತು ಅಮೆರಿಕ, ಇಸ್ರೇಲ್ ಮತ್ತು ಯುರೋಪ್‌’ಗೆ ಹೋಗುವ ಹಡಗುಗಳಿಗೆ ಮಾತ್ರ ಈ ಮಾರ್ಗದ ಮೂಲಕ ಹಾದುಹೋಗಲು ಅವಕಾಶ ನೀಡುವುದಾಗಿ ಮತ್ತು ಇತರ ದೇಶಗಳಿಗೆ ಸಾರಿಗೆಯನ್ನ ಅನುಮತಿಸುವುದಾಗಿ ಅದು ಹೇಳಿದೆ.

ತೈಲ‌ ಆಮದಿನಲ್ಲಿ ಭಾರತಕ್ಕೆ ಬಿಗ್ ರಿಲೀಫ್ ನೀಡಿದ ಇರಾನ್ Read More »

ಯುಪಿಎಸ್ ಸಿ ಫಲಿತಾಂಶ ಪ್ರಕಟ| ಕರ್ನಾಟಕದ 22 ಮಂದಿ ವಿವಿಧ ಸೇವೆಗಳಿಗೆ ಆಯ್ಕೆ

ಸಮಗ್ರ ನ್ಯೂಸ್: ದೇಶದ ಅತ್ಯುನ್ನತ ಆಡಳಿತಾತ್ಮಕ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳನ್ನು ಆಯ್ಕೆ ಮಾಡುವ ಕೇಂದ್ರ ಲೋಕಸೇವಾ ಆಯೋಗದ (UPSC) 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ (CSE) ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಫಲಿತಾಂಶದಲ್ಲಿ ಕರ್ನಾಟಕದ ಅಭ್ಯರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು 22 ಮಂದಿ ವಿವಿಧ ಸೇವೆಗಳಿಗೆ ಆಯ್ಕೆಯಾಗುವ ಮೂಲಕ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ರಾಷ್ಟ್ರಮಟ್ಟದ ಸಾಧಕರು:ಈ ವರ್ಷದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ (Anuj Agnihotri) ಅವರು

ಯುಪಿಎಸ್ ಸಿ ಫಲಿತಾಂಶ ಪ್ರಕಟ| ಕರ್ನಾಟಕದ 22 ಮಂದಿ ವಿವಿಧ ಸೇವೆಗಳಿಗೆ ಆಯ್ಕೆ Read More »

ಮೃತ ಖಮೇನಿಯ ಅಧಿಕೃತ ‘X’ ಖಾತೆಯಿಂದ ಪೋಸ್ಟ್| ದಾಳಿಗೆ ಪ್ರತಿಕಾರ ತೀರಿಸುವುದಾಗಿ ಸಂದೇಶ

ಸಮಗ್ರ ನ್ಯೂಸ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಕೆಲವೇ ದಿನಗಳಲ್ಲಿ, ಅವರ ಅಧಿಕೃತ ‘X’ ಖಾತೆಯಲ್ಲಿ ಪ್ರಕಟವಾದ ಒಂದು ಪೋಸ್ಟ್ ಈಗ ಇಡೀ ಜಗತ್ತಿನ ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದೆ. ಈ ಪೋಸ್ಟ್‌ನಲ್ಲಿ ‘ಖೋರಂಶಹರ್ ಕ್ಷಣಗಳು’ ಬರಲಿವೆ ಎಂಬ ಎಚ್ಚರಿಕೆ ನೀಡಲಾಗಿದ್ದು, ಇದು ಇರಾನ್‌ನ ಮುಂದಿನ ಆಕ್ರಮಣಕಾರಿ ನಡೆಯ ಮುನ್ಸೂಚನೆಯೇ ಎಂಬ ಚರ್ಚೆ ಶುರುವಾಗಿದೆ. ​’ಖೋರಂಶಹರ್’ ಎಂಬುದು ಇರಾನ್-ಇರಾಕ್ ಯುದ್ಧದ (1980-88) ಸಮಯದಲ್ಲಿ

ಮೃತ ಖಮೇನಿಯ ಅಧಿಕೃತ ‘X’ ಖಾತೆಯಿಂದ ಪೋಸ್ಟ್| ದಾಳಿಗೆ ಪ್ರತಿಕಾರ ತೀರಿಸುವುದಾಗಿ ಸಂದೇಶ Read More »

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಬಿಗ್‌ ಗಿಫ್ಟ್‌ ನೀಡಿದ್ದಾರೆ. ರಾಜ್ಯದ ಅತ್ಯಂತ ಶ್ರೀಮಂತ ಹಾಗೂ ಪ್ರಸಿದ್ಧ ದೇವಾಲಯಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ Read More »

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಅತ್ಯಂತ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ವಿಪರೀತವಾಗುತ್ತಿರುವ ಮೊಬೈಲ್ ಗೀಳು ಹಾಗೂ ಸಾಮಾಜಿಕ ಜಾಲತಾಣಗಳ ದಾಸ್ಯದಿಂದ ಎಳೆಯ ಮನಸ್ಸುಗಳನ್ನು ಪಾರುಮಾಡುವ ಉದ್ದೇಶದಿಂದ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಿತಿಮೀರುತ್ತಿದ್ದು, ಇದು ಅವರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ತೀವ್ರ ಸ್ವರೂಪದ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡಿರುವ

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ Read More »