April 2026

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು

ಸಮಗ್ರ ನ್ಯೂಸ್: ಪುತ್ತೂರು ನಗರದಲ್ಲಿ ಎಲ್.ಪಿ.ಜಿ (LPG) ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದನ್ನು ವಿರೋಧಿಸಿ ಆಟೋ ರಿಕ್ಷಾ ಚಾಲಕರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಉಂಟಾದ ಆಕ್ರೋಶದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಅನಿವಾರ್ಯವಾಗಿ ವ್ಯಾಪಾರ ಸ್ಥಗಿತಗೊಳಿಸಿ ಬಂಕ್ ಬಂದ್ ಮಾಡಿದ್ದಾರೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಮುಂಭಾಗವಿರುವ ಎಲ್.ಪಿ.ಜಿ ಬಂಕ್‌ನಲ್ಲಿ ಪ್ರತಿ ಕೆ.ಜಿ ಅನಿಲಕ್ಕೆ 120 ರೂಪಾಯಿ ನಿಗದಿಪಡಿಸಲಾಗಿತ್ತು. ನಗರದ ಇತರ ಕೆಲವು ಬಂಕ್‌ಗಳಲ್ಲಿ 95 ರೂಪಾಯಿಗೆ ಎಲ್.ಪಿ.ಜಿ ಸಿಗುತ್ತಿದ್ದರೆ, ಇಲ್ಲಿ ಮಾತ್ರ 25 […]

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು Read More »

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ Read More »

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು

ಸಮಗ್ರ ನ್ಯೂಸ್: ಇಬ್ಬರು ಮಹಿಳೆಯರೊಂದಿಗೆ ಬಂದ ಮೂವರ ತಂಡ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಮಳಿಗೆಯೊಂದರಿಂದ ಸುಮಾರು ₹ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು ಮಾಡಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ‌ನಗರದ ಹೆಗ್ಡೆ ಆರ್ಕೇಡ್‌ನಲ್ಲಿರುವ ‘ಆರ್.ಕೆ.ಜ್ಯುವೆಲ್ಲರ್ಸ್‌’ ಚಿನ್ನಾಭರಣ ಮಳಿಗೆಯಲ್ಲಿ ಕಳವು ನಡೆದಿದೆ. ಘಟನೆಗೆ ಸಂಬಂಧಿಸಿ ಮಳಿಗೆಯ ಮಾಲೀಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಮಾರ್ಚ್‌ 30ರಂದು ವಿವಿಧ ವಿನ್ಯಾಸದ ಆಭರಣಗಳನ್ನು ತೋರಿಸುವಂತೆ ಮೂವರು ಅಪರಿಚಿತರು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು Read More »

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ 19 ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನ ಕಡೆಯಿಂದ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡು ಬಂದಿದೆ. ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ Read More »

ಕೊಕ್ಕಡ: ಬಾರ್ ನಲ್ಲಿ ಹೊಡೆದಾಟ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದ ಬಾರ್ ಒಂದರಲ್ಲಿ ಮದ್ಯ ಸೇವಿಸುವ ಸಮಯ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡ ಗ್ರಾಮದ ಹೊಸಮನೆ ನಿವಾಸಿ ಅಕ್ಷಯ್ ಮಾರ್ಚ್‌ 29ರಂದು ರಾತ್ರಿ ಬಾರ್‌ನಲ್ಲಿ ಇದ್ದಾಗ ಯತೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ಹೊರಗೆ ಎಳೆದುಕೊಂಡು ಗೋಗಿದ್ದ. ಬಾರ್‌ನ ಹಿಂಬದಿಯಲ್ಲಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ಸೇರಿ ಹಲ್ಲೆ ನಡೆಸಿ ಕೊಲೆ ಬೆದರಿಕೆ

ಕೊಕ್ಕಡ: ಬಾರ್ ನಲ್ಲಿ ಹೊಡೆದಾಟ; ಪ್ರಕರಣ ದಾಖಲು Read More »

ಮಹಾಲಿಂಗೇಶ್ವರ ದೇವರ ಕಾರ್ಯದಯ ಜಗನ್ನಿವಾಸ ರಾವ್ ನನ್ನು ಹೊರಗಿಡಿ, ಇಲ್ಲದಿದ್ರೆ ಕೊಡಿಮರದಡಿ ಕುಳಿತು ಪ್ರತಿಭಟಿಸುವೆ| ಅತ್ಯಾಚಾರ ಸಂತ್ರಸ್ತೆ ತಾಯಿ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಅವರನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಧಾರ್ಮಿಕ ಕಾರ್ಯಗಳಿಂದ ದೂರ ಇಡಬೇಕು , ಇಲ್ಲದಿದ್ದರೆ ಜಾತ್ರೆ ಧ್ವಜಾರೋಹಣದ ವೇಳೆ ಕೊಡಿಮರದಡಿ ಕುಳಿತು ದೇವರಲ್ಲಿ ನ್ಯಾಯ ಕೇಳುತ್ತೇನೆ ಎಂದು ಸಂತ್ರಸ್ತೆಯ ತಾಯಿ ನಮಿತಾ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ಯುವತಿಗೆ ಅನ್ಯಾಯ ಮಾಡಿದವರನ್ನು ದೇವರ ಕೆಲಸದಲ್ಲಿ ತೊಡಗಿಸಲು ಬಿಡಬಾರದು. ಏಪ್ರಿಲ್ 10 ರಂದು ನಡೆಯಲಿರುವ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಗನ್ನಿವಾಸ್ ರಾವ್ ಭಾಗವಹಿಸಬಾರದು.

ಮಹಾಲಿಂಗೇಶ್ವರ ದೇವರ ಕಾರ್ಯದಯ ಜಗನ್ನಿವಾಸ ರಾವ್ ನನ್ನು ಹೊರಗಿಡಿ, ಇಲ್ಲದಿದ್ರೆ ಕೊಡಿಮರದಡಿ ಕುಳಿತು ಪ್ರತಿಭಟಿಸುವೆ| ಅತ್ಯಾಚಾರ ಸಂತ್ರಸ್ತೆ ತಾಯಿ ಹೇಳಿಕೆ Read More »

ಹನುಮ ಜಯಂತಿ ಆಚರಣೆ ಹಿನ್ನಲೆ| ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು

ಹನುಮ ಜಯಂತಿ ಆಚರಣೆ ಹಿನ್ನಲೆ| ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ Read More »

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

ಸಮಗ್ರ ನ್ಯೂಸ್: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಭೂಕಂಪ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ Read More »

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಹವಾಮಾನ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಮೃತ ಸುದೀಪ್ ಶೆಟ್ಟಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಇತ್ತಆಕೆ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ನಟಿಸುವ ನಟಿ ಸೌಮ್ಯಾ ಶೆಟ್ಟಿ. ಇವರಿಬ್ಬರಿಗೂ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈ ಸ್ನೇಹ

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? Read More »

ಎ.10ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕರಾರಸಾನಿ

ಸಮಗ್ರ ನ್ಯೂಸ್: ಪರೀಕ್ಷೆ ಇನ್ನಿತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತೊಂದರೆ ಆಗದಂತೆ ರಾಜ್ಯ ಸಾರಿಗೆ ವಾಹನಗಳು ಉಚಿತ ಪ್ರಯಾಣ ನೀಡುತ್ತಿವೆ. ಇದೀಗ ಅಗತ್ಯತೆ ಆಧಾರದಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) 1 ರಿಂದ 9ನೇ ತರಗತಿ ಮಕ್ಕಳಿಗೆ ಖುಷಿ ಸುದ್ದಿ ನೀಡಿದೆ. 2025-26ನೇ ಸಾಲಿನ 01 ರಿಂದ 09ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳು ಏಪ್ರಿಲ್ 10ರವರೆಗೂ ನಡೆಯಲಿವೆ. ದಿನಪತ್ರಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಿರುವ ಬಸ್

ಎ.10ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕರಾರಸಾನಿ Read More »